ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ಡೌನ್ ಪರಿಣಾಮ ಎರಡು ತಿಂಗಳು ಬಸ್ ಸಂಚಾರ ಬಂದ್ ಆಗಿತ್ತು. ಇದೀಗ ಬಸ್ ಸಂಚಾರ ಶುರು ಆಗಿದೆ. ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಮಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ಸೊಂದು 10:30ರ ಸುಮಾರಿಗೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರ ಸಹಿತ ಬಂದಿತ್ತು. ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ಸ್ಯಾನಿಟೈಸರ್ ಮಾಡುವ ವೇಳೆ ಬಸ್ಸಿನ ಮೀಟರ್ ಬೋರ್ಡ್ ಬಳಿ ಹೆಬ್ಬಾವಿನ ಮರಿ ಕಾಣಿಸಿಕೊಂಡಿದೆ. ಸುಮಾರು ಒಂದೂವರೆ ಅಡಿ ಉದ್ದದ ಹೆಬ್ಬಾವಿನ ಮರಿ ಅಂದಾಜು ಐದು ತಿಂಗಳಿನದ್ದು ಎನ್ನಲಾಗುತ್ತಿದೆ.
ಬಸ್ ನಲ್ಲಿ ಮರಿ ಹೆಬ್ಬಾವು ಕಂಡು ಗಾಬರಿಗೊಂಡ ಕೆಎಸ್ ಆರ್ ಟಿಸಿ ಸಿಬ್ಬಂದಿ ಬಿಬಿಎಂಪಿ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಬಿಬಿಎಂಪಿ ಅರಣ್ಯಸಂರಕ್ಷಾ ಘಟಕದ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿ ಹೆಬ್ಬಾವಿನ ಮರಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ಲಾಕ್ಡೌನ್ನಿಂದಾಗಿ ಕಳೆದ ಎರಡು ತಿಂಗಳಿನಿಂದ ಮಂಗಳೂರು ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಸನ್ನು ನಿಲ್ಲಿಸಿಲಾಗಿತ್ತು. ನಿನ್ನೆ ಬೆಂಗಳೂರಿಗೆ ಮೊದಲ ಟ್ರಿಪ್ ಬಸ್ ಬಂದಿತ್ತು. ಮಂಗಳೂರಲ್ಲಿ ಬಸ್ ನಿಲ್ಲಿಸಿದ್ದಾಗ ಇಂಜಿನ್ ಬಳಿ ಹೆಬ್ಬಾವಿನ ಮರಿ ಆಶ್ರಯ ಪಡೆದಿದೆ. ಬಸ್ ನ್ನು ಸ್ಯಾನಿಟೈಸರ್ ಮಾಡಲು ಮಾಡಿದಾಗ ಹಾವಿನ ಮರಿ ಹೊರ ಬಂದಿದೆ.



