ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಅನ್ನು ಮೇ 3 ರ ವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದದೆ. ಈ ಮೂಲಕ ಏ. 21 ನಂತರ ಲಾಕ್ ಡೌನ್ ಸಡಿಲಗೊಳಿಸಲಾಗುತ್ತದೆ ಎನ್ನುವ ವದಂತಿಗೆ ಬ್ರೇಕ್ ಬಿದ್ದಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಿಸಿದಂತೆ ಮೇ. 3 ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಯಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಲಾಕ್ ಡೌನ್ ಸಡಿಲಗೊಳಿಸಿ, ಬೈಕ್ ಸವಾರಿಗೆ, ಅಗತ್ಯ ವಸ್ತು ವಾಹನ ಓಡಾಟಕ್ಕೆ ಅವಕಾಶ ಕಲ್ಪಿಸುವುದಾಗಿ ಶನಿವಾರ ಆದೇಶ ಹೊರಡಿಸಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಮತ್ತೆ ಆದೇಶ ವಾಪಸ್ಸು ತಗೆದುಕೊಳ್ಲಲಾಗಿತ್ತು.ಇದೀಗ ಮತ್ತೆ ಮೇ.3 ವರೆಗೆ ಲಾಕ್ ಡೌನ್ ಯಥಾ ಸ್ಥಿತಿ ಮುಂದುವರಿಯಲಿದೆ ಎಂದು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಕೈಗೊಂಡ ಪ್ರಮುಖಾಂಶಗಳು
- ರಾಜ್ಯದಲ್ಲಿ ಮೇ 3 ರ ವರೆಗೂ ಲಾಕ್ ಡೌನ್ ಯಥಾಸ್ಥಿತಿ
- ಅಗತ್ಯ ಸೇವೆಯಲ್ಲಿರುವವರು ಸಹಕರಿಸದೇ ಹೋದರೆ ಶಿಕ್ಷಾರ್ಹ ಅಪರಾಧ
- ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ
- ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಸಲಹೆ



