ದಾವಣಗೆರೆ: ಲಾಕ್ ಡೌನ್ ವೇಳೆಯ ಹಣ್ಣು, ತರಕಾರಿ ನಷ್ಟದ ಪರಿಹಾರ ಪಡೆಯಲು ರೈತರು ಏನು ಮಾಡಬೇಕು ಗೊತ್ತಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್‍ಡೌನ್ ವೇಳೆ ಹಣ್ಣು, ತರಕಾರಿ ಬೆಳೆದು ಸಂಕಷ್ಟಕ್ಕೆ ಒಳಗದ ರೈತರಿಗೆ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸರ್ಕಾರ ಪರಿಹಾರ ಘೋಷಿಸಿದ್ದು, ರೈತರು ಅಗತ್ಯ ದಾಖಲಾತಿ ಸಲ್ಲಿಸದ ಕಾರಣ ಪರಿಹಾರ ವಿಳಂಬವಾಗುತ್ತಿದೆ. ಕೂಡಲೇ ಸಂಬಂಧಪಟ್ಟ ರೈತರು ಆಗಸ್ಟ್ 31 ರೊಳಗೆ ದಾವಣಗೆರೆ ತಾಲ್ಲೂಕು ತೋಟಗಾರಿಕೆ ದಾಖಲಾತಿ ಸಲ್ಲಿಸಲು ಸೂಚಿಸಲಾಗಿದೆ.

 

2019-20 ನೇ ಸಾಲಿನ ಬೆಳೆ ಸಮೀಕ್ಷೆಯಲ್ಲಿರುವ ದಾವಣಗೆರೆ ತಾಲ್ಲೂಕಿನ ರೈತ ಬಾಂಧವರು ಅಗತ್ಯ ದಾಖಲಾತಿಗಳಾದ ಪ್ರಸಕ್ತ ಸಾಲಿನ ಪಹಣಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಬ್ಯಾಂಕ್ ಪಾಸ್‍ಪುಸ್ತಕದ ಜೆರಾಕ್ಸ್ ಪ್ರತಿ, ಫಲಾನುಭವಿ ಮರಣ ಹೊಂದಿದ್ದಲ್ಲಿ ಮರಣ ದೃಢೀಕರಣ ಪತ್ರ ಇತ್ಯಾದಿ ಸಲ್ಲಿಸದೇ ಇರುವ ಕಾರಣ ಪರಿಹಾರ ವಿತರಣೆ ವಿಳಂಬವಾಗುತ್ತಿದೆ.

ರೈತರು ಆ.31 ರೊಳಗೆ ದಾವಣಗೆರೆ ತಾಲ್ಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕೆಂದು ದಾವಣಗೆರೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಶಶಿಕಲಾ ಟಿ.ಆರ್. ವಿನಂತಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *