ಡಿವಿಜಿ ಸುದ್ದಿ, ಹಾಸನ: ಭಾನುವಾರ ಎಂದಿನಂತೆ ಲಾಕ್ಡೌನ್ ಮುಂದುವರಿಯಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ ನಿಂದಲೂ ಕೂಡ ಪ್ರತೀ ಭಾನುವಾರ ಲಾಕ್ಡೌನ್ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನುಡಿದಂತೆ ನಡೆದ ನಾಯಕ. ಕೊರೊನಾ ಸಮಯದಲ್ಲಿ ಪಡಿತರ ವಿತರಣೆಯಲ್ಲಿ ರಾಜ್ಯ ಸರ್ಕಾರ ಪ್ರಥಮ ಸ್ಥಾನದಲ್ಲಿದೆ. ಹಾಸನದಲ್ಲಿನ 7 ಖಾಸಗಿ ಆಸ್ಪತ್ರೆಯಲ್ಲಿ 290 ಬೆಡ್ ಮೀಸಲಿರಿಸಲಾಗಿದೆ. ಕೊರೊನಾ ರೋಗಿಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು.
ಎಚ್. ವಿಶ್ವನಾಥ್ ಸಂಪುಟ ಸೇರ್ಪಡೆಯಾಗುವ ಸೂಚನೆ ನೀಡಿದ್ದು, ಹಾಸನ ಜಿಲ್ಲೆಗೆ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ ಎಂಬ ಮಾಜಿ ಸಚಿವ ಹೆಚ್ಡಿ.ರೇವಣ್ಣ ಆರೋಪ ಸತ್ಯಕ್ಕೆ ದೂರ ಎಂದರು.



