Connect with us

Dvgsuddi Kannada | online news portal | Kannada news online

ಅಗತ್ಯ ವಸ್ತು ಕೊಳ್ಳುವರಿಗೆ,  ತಮ್ಮ ಊರುಗಳಿಗೆ ಹೋಗಲು ಸೋಮವಾರ ಅವಕಾಶ: ಸಚಿವ ಆರ್.‌ ಅಶೋಕ್

ಪ್ರಮುಖ ಸುದ್ದಿ

ಅಗತ್ಯ ವಸ್ತು ಕೊಳ್ಳುವರಿಗೆ,  ತಮ್ಮ ಊರುಗಳಿಗೆ ಹೋಗಲು ಸೋಮವಾರ ಅವಕಾಶ: ಸಚಿವ ಆರ್.‌ ಅಶೋಕ್

ಡಿವಿಜಿ ಸುದ್ದಿ, ಬೆಂಗಳೂರು: ಮಂಗಳವಾರ ರಾತ್ರಿಯಿಂದ ಬೆಂಗಳೂರು ಲಾಕ್ ಡೌನ್ ಜಾರಿ ಆಗುವುದರಿಂದ ತಮ್ಮ ಊರುಗಳಿಗೆ ಹೋಗುವವರು , ಅಗತ್ಯ ವಸ್ತು ಕೊಳ್ಳುವವರು ಸೋಮವಾರವೇ ಕೊಂಡುಕೊಳ್ಳಿ ಎಂದು ಸಚಿವ ಆರ್ ಅಶೋಕ್ ಹೇಳಿದರು.

ಮಾರ್ಗಸೂಚಿ ಬಗ್ಗೆ ಮುಖ್ಯ ಕಾರ್ಯದರ್ಶಿ ಜೊತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ನಾಳೆ  ಮಾರ್ಗಸೂಚಿ ಬಿಡುಗಡೆ ಆಗಲಿದೆ ಎಂದರು.

ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅಧಿಕಾರಿಗಳ ಜೊತೆ ಭಾನುವಾರ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದರು, ಲಾಕ್‌ಡೌನ್‌ ಅವಧಿಯಲ್ಲಿ ವೈದ್ಯಕೀಯ ಸಂಬಂಧಿತ ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

bandhu

ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್ ಡೌನ್ ಘೋಷಿಸಲಾಗಿದೆ. ಜನಸಾಮಾನ್ಯರಿಗೆ ತೊಂದರೆ ಆಗದಿರಲಿ, ಅಗತ್ಯ ವಸ್ತುಕೊಳ್ಳಲು, ಊರುಗಳಿಗೆ ಹೋಗುವರಿಗೆ ಅನುಕೂಲ ಆಗಲಿ ಎಂದು ಸೋಮವಾರ ಬಿಡುವು ನೀಡಲಾಗಿದೆ ಎಂದು ತಿಳಿಸಿದರು.

ಸೋಂಕು ಹರಡುವಿಕೆ ನೋಡಿಕೊಂಡು ವಿಸ್ತರಣೆ ಮಾಡಬೇಕೊ ಅಥವಾ ಬೇಡವೊ ಎಂದು ನಂತರ ನಿರ್ಧರಿಸುತ್ತೇವೆ. ತಜ್ಞರ ವರದಿ  ಪಡೆದು  ಎರಡು ದಿನ ಮೊದಲೇ ತಿಳಿಸುತ್ತೇವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top