ಡಿವಿಜಿ ಸುದ್ದಿ, ಬೆಂಗಳೂರು: ದಿನದಿಂದ ದಿನಕೊರೊನಾ ಸ್ಫೋಟವಾಗುತ್ತಲೇ ಇದೆ. ಕೊರೊನಾ ಹರಡದಂತೆ ತಡೆಯಲು ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ್ದು, ಇಂದು ರಾತ್ರಿಯಿಂದಲೇ ಕರ್ನಾಟಕ ಲಾಕ್ ಡೌನ್ ಜಾರಿಗೆ ಬರಲಿದೆ.
ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಆರ್ಥಿಕ ಚಟುವಟಿಕೆ ಬಂದ್ ಆಗಲಿದೆ. ರಾತ್ರಿ 8ರ ನಂತರ ಓಡಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.
ನಾಳೆ ಏನಿರುತ್ತೆ?
ಹಣ್ಣು, ತರಕಾರಿ, ದಿನಸಿ ಪದಾರ್ಥ
ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್, ಮಾಧ್ಯಮ
ಡಾಕ್ಟರ್ಸ್, ನರ್ಸ್ ಗಳಿಗೆ ಆಂಬುಲೆನ್ಸ್, ಓಡಾಟ
ಗರ್ಭಿಣಿ ಸ್ತ್ರೀಯರಿಗೆ ತಪಾಸಣೆಗೆ ಸಮಸ್ಯೆ ಇಲ್ಲ
ತುರ್ತು ಚಿಕಿತ್ಸೆ, ರೋಗಿಗಳಿಗೆ ಆಸ್ಪತ್ರೆ ಹೋಗಲು ಅವಕಾಶ
ಏನಿರಲ್ಲ?
ರಸ್ತೆಗಿಳಿಯಲ್ಲ ಆಟೋ, ಕ್ಯಾಬ್, ಬೈಕ್
ಬಾರ್, ಸೆಲೂನ್, ಬ್ಯೂಟಿ ಪಾರ್ಲರ್, ಪಾರ್ಕ್ ಕ್ಲೋಸ್
ಗಾರ್ಮೆಂಟ್ಸ್, ಫ್ಯಾಕ್ಟರಿ, ಕಾರ್ಖಾನೆಗಳು, ಕಂಪನಿಗಳು ಸ್ತಬ್ಧ
ಎಲ್ಲಾ ಪಾರ್ಕ್ ಗಳು ಬಂದ್
ಮದ್ಯದಂಗಡಿ ಸಂಪೂರ್ಣ ಬಂದ್
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಓಡಲ್ಲ
ಹೋಟೆಲ್ಗಳು ಪಾರ್ಸಲ್ ಮಾತ್ರ



