ನವದೆಹಲಿ: ಲಾಕ್ ಡೌನ್ ಮುಂದುವರಿಯುತ್ತಾ..? ಇಲ್ಲವೋ..? ಅಥವಾ ಸೀಲ್ಡ್ ಡೌನ್ ಹೇರಲಾಗುತ್ತಾ…ಹೀಗೆ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲಗಳಿವೆ. ಈ ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬೀಳುವ ಸಾದ್ಯತೆ ಇದೆ. ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಂದ ವರದಿ ಕೇಳಿದ್ದು, ರಾಜ್ಯ ಸರ್ಕಾರಗಳು ತಮ್ಮ ಅಭಿಪ್ರಾಯ ತಿಳಿಸಲಿವೆ.

ಇನ್ನೇನು ಲಾಕ್ ಡೌನ್ ಮುಗಿತು ಅಂದುಕೊಂಡವರಿಗೆ ಬಿಗ್ ಶಾಕ್ ಕಾದಿದೆ. ಲಾಕ್ ಡೌನ್ ವಿಸ್ತರಣೆ ಸಂಬಂಧ ಇಂದು ಮಹತ್ವದ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಲಾಕ್ ಡೌನ್ ಮುಂದುವರಿಸುವಂತೆ ಎಂಟಕ್ಕೂ ಹೆಚ್ಚು ರಾಜ್ಯಗಳು ಮನವಿ ಮಾಡಿಕೊಂಡಿದೆ. ಒಡಿಶಾ ಒಂದು ಹಂತಕ್ಕೆ ಮುಂದೆ ಹೋಗಿ ಎ.30 ವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈಗ ದೇಶದಲ್ಲಿ ಲಾಕ್ ಡೌನ್ ಮುಂದುವರಿಸಬೇಕಾ ಅಥವಾ ಬೇಡವಾ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಎಲ್ಲ ರಾಜ್ಯ ಸರ್ಕಾರಗಳು ತಮ್ಮ ಅಭಿಪ್ರಾಯದ ವರದಿಗಳನ್ನು ಕೇಂದ್ರ ಸರ್ಕಾರಕ್ಕೆ ನೀಡುವ ಸಾಧ್ಯತೆ ಇದೆ. ಈ ವರದಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪರಿಶೀಲನೆ ನಡೆಸಲಿದ್ದಾರೆ. ಇಂದು ಬಹುತೇಕ ಎಲ್ಲ ರಾಜ್ಯಗಳು ತಮ್ಮ ವರದಿ ನೀಡಲಿದ್ದು, ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ವೇಳೆ ಕೆಲವು ರಾಜ್ಯಗಳು ತಮ್ಮ ಅಭಿಪ್ರಾಯವನ್ನು ಪ್ರಧಾನಿ ಮುಂದಿಡಲಿವೆ.
ಈ ಎಲ್ಲ ಅಭಿಪ್ರಾಯಗಳನ್ನು ಪಡೆದುಕೊಳ್ಳಲಿರುವ ಪ್ರಧಾನಿ ಮೋದಿ ಎಪ್ರಿಲ್ 14 ರ ಬಳಿಕ ಡೌನ್ ಮುಂದುವರಿಸಬೇಕಾ ಅಥವಾ ಹಂತ ಹಂತವಾಗಿ ತೆರವು ಮಾಡಬೇಡ ಬೇಕಾ ಅನ್ನೋ ನಿರ್ಧಾರ ಮಾಡಲಿದ್ದು, ಇಂದು ರಾಜ್ಯಗಳು ನೀಡುವ ವರದಿ ನಿರ್ಣಾಯಕವಾಗಲಿದೆ.



