ಒಂದು ವರ್ಷದೊಳಗೆ ಅಪ್ಪು ಗೌಡ ಸಚಿವನಾಗದಿದ್ರೆ, 10 ಶಾಸಕರು ರಾಜೀನಾಮೆ ನೀಡಲಿದ್ದಾರೆ: ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಕಲಬುರಗಿ: ಒಂದು ವರ್ಷದೊಳಗೆ ಶಾಸಕ  ಅಪ್ಪುಗೌಡ ( ದತ್ತಾತ್ತೇಯ ಪಾಟೀಲ್ ) ಅವರಿಗೆ   ಸಚಿವ ಸ್ಥಾನ ನೀಡದಿದ್ದರೆ, 10  ಶಾಸಕರ ರಾಜೀನಾಮೆ ನೀಡಲಿದ್ದಾರೆ  ಎಂದು ಶ್ರೀ ಶೈಲ ಸಾರಂಗ ಮಠದ ಪೀಠಾಧಿಪತಿ ಮಹಾಂತ ಶಿವಾಚಾರ್ಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಶಾಸಕ ದತ್ತಾತ್ರೇಯ ಪಾಟೀಲ್ ಹುಟ್ಟುಹಬ್ಬ ನಿಮಿತ್ತ ಕಲಬುರಗಿಯ ಎನ್.ವಿ ಮೈದಾನದಲ್ಲಿ ಆಯೋಜಿಸಿದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ಈ ಭಾಗದಲ್ಲಿ ಬಿಜೆಪಿಯನ್ನು ಒಂದು ನಾಯಿ ಸಹ ಕೇಳುತ್ತಿರಲಿಲ್ಲ. ಅಂತಹ ಸಮಯದಲ್ಲಿ ದಿ.ಚಂದ್ರಶೇಖರ್ ಪಾಟೀಲ್ ಪಕ್ಷ ಕಟ್ಟಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಇದೀಗ ಅವರ ಪುತ್ರ ದತ್ತಾತ್ರೇಯ ಪಾಟೀಲ್ ಸಚಿವನಾಗಲೇಬೇಕು ಎಂದು ಒತ್ತಾಯಿಸಿದರು.

dathatreaya patil 2

ಈ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು  ಭೇಟಿ ಮಾಡಿದ್ದಾಗ   ಒಂದು ವರ್ಷ ಸಮಯ ಕೇಳಿದ್ದಾರೆ.ಆಗಲೂ  ಸಚಿವ ಸ್ಥಾನ ಸಿಗದಿದ್ದರೆ, 10 ಜನ ಶಾಸಕರ ರಾಜೀನಾಮೆ ಕೊಡಿಸುತ್ತೇವೆ ಎಂದು  ಶಿವಾಚಾರ್ಯ ಗುಡುಗಿದರು.

ಯಡಿಯೂರಪ್ಪ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿಯೂ  ಮುಖ್ಯಮಂತ್ರಿ ಆಗಬೇಕು. ಅವರ ನಂತರ  ಮುಂದಿನ 30 ವರ್ಷ ಯಾರು ಲಿಂಗಾಯತ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಆಗುವುದಿಲ್ಲ.  ಯಡಿಯೂರಪ್ಪ ಆರೋಗ್ಯದಲ್ಲಿ ಸಮಸ್ಯೆಯಾದರೆ ಕರುಣಾನಿಧಿಯಂತೆ ಆಸ್ಪತ್ರೆಯಿಂದ ಆಡಳಿತ ನೋಡಿಕೊಳ್ಳಲಿ  ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *