ಮಂಗಳೂರಲ್ಲಿ ಪ್ರತಿಭಟನಕಾರು ಕಲ್ಲು ಸಂಗ್ರಹಿಸಿದ್ದರು ಎಂಬುದು ಕಟ್ಟು ಕತೆ: ಎಚ್ ಡಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬೆಂಗಳೂರು: ಮಂಗಳೂರಲ್ಲಿ ಡಿಸೆಂಬರ್  24 ರಂದು ನಡೆದ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕಲ್ಲು ಸಂಗ್ರಹಿಸಿ ತಂದಿದ್ದರು ಎಂಬು ಬಿಜಿಪಿಯ ಕಟ್ಟು ಕತೆ  ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ಗಲಭೆಯಲ್ಲಿ ಪೊಲೀಸರ ಪಾತ್ರದ ಕುರಿತ ವಿಡಿಯೋ ಬಿಡುಗಡೆ ಮಾತನಾಡಿದ ಅವರು, ಪ್ರತಿಭಟನಾಕಾರರು ಬಂದರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಸಿ ಟಿವಿ ವಿಡಿಯೊಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ನಿಜವಾಗಿ ಅಲ್ಲಿ ಆಗಿರುವುದೇ ಬೇರೆ. ಬಿಜೆಪಿ ಅವರು ಕಟ್ಟು ಕತೆ ಕಟ್ಟಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.  ಮೂರು ಬಾರಿ ಕಟ್ಟಡ ತ್ಯಾಜ್ಯ ಸಾಗಿಸಿದ್ದ ಸರಕು ಸಾಗಾಣೆ ಟೆಂಪೊ ಚಾಲಕ,  ನಾಲ್ಕನೇ  ಬಾರಿ ಬರುವಾಗ ಗಲಭೆ ಉಂಟಾದ ಕಾರಣ ತನ್ನ ಆಟೊವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದ. ಆದರೆ ಅದನ್ನೇ ಕತೆ ಕಟ್ಟಿ ಕಲ್ಲು ತಂದು ಇಡಲಾಗಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

ಗಲಭೆಕೋರರು ಕೇರಳದಿಂದ ಬಂದವರು ಎಂದು ಗೃಹ ಸಚಿವರು ಹೇಳುತ್ತಾರೆ,  ಪೊಲೀಸರು ನಿತ್ಯವೂ ಒಂದೊಂದು ಕತೆ ಕಟ್ಟುತ್ತಿದ್ದಾರೆ. ರಾಜ್ಯವನ್ನು ಮತ್ತೊಂದು ಕಾಶ್ಮೀರ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತಿ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಬೇಕಿದ್ದ ಪೀಪಲ್ಸ್ ಕೋರ್ಟ್, ಚರ್ಚಾ ಕಾರ್ಯಕ್ರಮ ನಡೆಸಲು ಅವಕಾಶ ನಿರಾಕರಿಸಿದ ಸರ್ಕಾರದ ಕ್ರಮವನ್ನು ಪ್ರಬಲವಾಗಿ ವಿರೋಧಿಸುತ್ತೇನೆ. ನಾನು ಈ ವಿಡಿಯೊ ಸಾಕ್ಷ್ಯವನ್ಮು ಸದನದಲ್ಲಿ ಬಹಿರಂಗಪಡಿಸಲು ಸಂಗ್ರಹಿಸಿ ಇಟ್ಟಿದ್ದೆ. ಆದರೆ, ನಿವೃತ್ತ ನ್ಯಾಯಮೂರ್ತಿಗಳಿಗೇ ಮಾತನಾಡದಿದ್ದಾಗ  ಸಿ.ಡಿಯನ್ನು ಬಹಿರಂಗಪಡಿಸಲು ನಿರ್ಧರಿಸಿದೆ. ಸಿ.ಡಿ.ಯನ್ನು ಈಗ ಜನತೆಯ ತೀರ್ಮಾನಕ್ಕೆ ಬಿಡಲಾಗಿದೆ ಎಂದರು.

ಉಡುಪಿ ಜಿಲ್ಲಾಧಿಕಾರಿಯ  ಮ್ಯಾಜಿಸ್ಟ್ರೇಟ್‌ ತನಿಖೆಯಿಂದ ಏನು ವರದಿ ಬರಲು ಸಾಧ್ಯ. ನ್ಯಾಯಮೂರ್ತಿ ಗೋಪಾಲಗೌಡ ಅವರು ಮಂಗಳೂರಿನಲ್ಲಿ ಮಾತನಾಡದಂತೆ ಮುಖ್ಯಮಂತ್ರಿ ಅವರು ಸೂಚಿಸಿದ್ದರೇ ಎಂದು ಪ್ರಶ್ನಿಸಿದರು.

ಗಲಭೆಯಲ್ಲಿ ಪೊಲೀಸರಿಗೆ ಗಾಯವಾಗಿದೆ ಎಂದಿದ್ದಾರೆ. ಆದರೆ ಗಾಯಗೊಂಡ ಒಬ್ಬನೇ ಒಬ್ಬ ಪೊಲೀಸ್ ಅಧಿಕಾರಿಯನ್ನು ನಾನು ಆಸ್ಪತ್ರೆಯಲ್ಲಿ ನೋಡಲಿಲ್ಲ. ವಿಧಾನಸಭೆಯಲ್ಲಿ ಮಂಗಳೂರು ಗಲಭೆಯ ಬಗ್ಗೆ ವಿಷಯ ಪ್ರಸ್ತಾಪಿಸುತ್ತೇನೆ. ಇದನ್ನು ಸುಲಭವಾಗಿ ಬಿಡುವುದಿಲ್ಲ. ಪೊಲೀಸ್ ಠಾಣೆಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದರು ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಒಂದು ಬಂದೂಕು ಅಂಗಡಿಗೆ ನುಗ್ಗಲು ಯತ್ನಿಸಿದರು ಎಂದು ಪೊಲೀಸ್ ಕಮಿಷನರ್ ಹೇಳುತ್ತಾರೆ. ಯಾರು ಹೇಳಿದ್ದು ಸರಿ ಎಂಬುದನ್ನು ಜನತೆಗೆ ತಿಳಿಸಲಿ. ಗಲಭೆ ಬಗ್ಗೆ ಸದನ ಸಮಿತಿ ರಚಿಸಬೇಕು ಎಂದು ಅವರು ಒತ್ತಾಯಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *