ಡಿವಿಜಿ ಸುದ್ದಿ, ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ.
ನೆರೆಯ ಮಹಾರಾಷ್ಟದ ಮುಂಬೈನಿಂದ ಬಂದಿದ್ದ ಯುವಕನನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆ ಕ್ವಾರೆಂಟೈನ್ ಮಾಡಲಾಗಿತ್ತು. ಆದರೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕ್ವಾರಂಟೈನ್ ಮಾಡಲಾಗಿದ್ದ ಕಡಂದಲೆ ಶಾಲೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೊರೊನಾ ವೈರಸ್ ನ ಮುಂದಿನ ಜೀವನೋಪಾಯದ ಬಗ್ಗೆ ಹೆದರಿ ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



