ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ, ಅಣುಕು ಪ್ರದರ್ಶನದಂತೆ ಇತ್ತು: ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಚಿಕ್ಕಮಗಳೂರು: ನಿನ್ನೆಯ ಬಾಂಬ್ ಪತ್ತೆ ಪ್ರಕರಣ ಸಂಶಯಕ್ಕೆ ಎಡೆಮಾಡಿಕೊಡುವ ವಾತಾವರಣದಂತೆ ಇದ್ದು, ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಣುಕು ಪ್ರದರ್ಶನದಂತೆ ಕಾಣಿಸಿತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಜಿಲ್ಲೆಯ ಶೃಂಗೇರಿಗೆ ಚಂಡಿಕಾಯಾಗದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇವತ್ತಿನ ಬೆಳವಣಿಗೆ ಏನು, ಮಂಗಳೂರು ಕಮಿಷನರ್‌ ಹರ್ಷ ಅವರು ಇವತ್ತೇನಾದರೂ ಬಾಂಬ್‌ ಹಾಕಿಸಿದ್ರಾ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಅಧಿಕಾರಿಗಳು ಎಲ್ಲವನ್ನೂ ಸೂಕ್ಷ್ಮವಾಗಿ ಪರಿಗಣಿಸಬೇಕು. ಯಾರ ಮುಲಾಜಿಗೊಳಗಾಗದಂತೆ ಕರ್ತವ್ಯ ನಿರ್ವಹಿಸಬೇಕು. 14 ತಿಂಗಳು ಮೈತ್ರಿ ಸರ್ಕಾರ ಇದ್ದಾಗ ಈ ರೀತಿಯ ಪ್ರಕರಣಗಳು ಆಗಿರಲಿಲ್ಲ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಮಾಜದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತಿದೆ. ಎಲ್ಲರೂ ಸೌಹಾರ್ದಯುತವಾಗಿ ಬಾಳುವ ವಾತಾವರಣ ನಿರ್ಮಾಣ ಮಾಡಬೇಕಿರುವುದು ಸರ್ಕಾರದ ಕರ್ತವ್ಯ ಎಂದರು.

ನಿರ್ಜನ ಪ್ರದೇಶಕ್ಕೆ ಬಾಂಬ್‌ ತಗೆದುಕೊಂಡು ಹೋಗಿ ಸ್ಫೋಟಿಸಿರುವ ಪ್ರಕರಣಗಳು ಕಡಿಮೆ. ಮಾಧ್ಯಮಗಳಲ್ಲಿ ನಿನ್ನೆ ಸ್ಫೋಟ ಚಿತ್ರಣ ನೋಡಿದಾಗ ಬರಿ ಹೊಗೆ ಕಾಣಿಸುತ್ತಿತ್ತು. ಈ ರೀತಿ ಜನರನ್ನು ಭಯಭೀತರಾಗಿಸಬಾರದು. ಕರಾವಳಿಯ ಆರ್ಥಿಕ ಬೆಳವಣಿಗೆ ಕುಂಠಿತಗೊಳಿಸಿದ್ದು, ಜನರ ಜತೆ ಹುಡುಗಾಟ ಆಡದೆ ಸತ್ಯಾಂಶ ಹೇಳಿ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *