ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಈ ಬಗ್ಗೆ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಬರೆದುಕೊಂಡಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020
ಇತ್ತೀಚೆಗೆ ಅವರ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಆಗ ಸಚಿವ ಈಶ್ವರಪ್ಪ ಅವರು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬಂದಿತ್ತು. ಆದರೆ ಇಂದು ಪಾಸಿಟವ್ ಬಂದಿದೆ. ಸೋಮವಾರವಷ್ಟೇ ಸಚಿವ ಈಶ್ವರಪ್ಪ ಅವರು ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಕೋವಿಡ್ ವಾರ್ಡ್ಗಳ ಸ್ಥಿತಿಗತಿಯನ್ನು ವೀಕ್ಷಿಸಿದ್ದರು. ಅಲ್ಲದೆ ಕೋವಿಡ್ ವಾರ್ಡ್ಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮೆರಾ, ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆಯನ್ನು ಪರಿಶೀಲಿಸಿದ್ದರು. ಇದೀಗ ಸ್ವತಃ ಈಶ್ವರಪ್ಪನವರಿಗೇ ಸೋಂಕು ತಗುಲಿದೆ.



