ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ಯಲಹಂಕದ ಮೇಲ್ಸುತೇವೆಗೆ ವೀರ ಸಾವರ್ಕರ್ ಹೆಸರಿಟ್ಟರೆ ತಪ್ಪೇನು? ಸಾವರ್ಕರ್ ರಾಷ್ಟ್ರವಾದಿ, ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರು, ಜೈಲುವಾಸ ಅನುಭವಿಸಿದವರು. ಅವರ ಹೆಸರಿಟ್ಟರೆ ತಪ್ಪೇನು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರ್ ಸಾವರ್ಕರ್ ಹೆಸರಿಡಬೇಕು ಅಂತ ನಾನು ಒತ್ತಾಯಿಸುತ್ತೇನೆ. ಕೆಲವರು ವಿನಾಕಾರಣ ವಿರೋಧ ಮಾಡ್ತಿದ್ದು, ಅದು ಅನಾವಶ್ಯಕ ವಿಚಾರ. ಇಡೀ ದೇಶದಲ್ಲಿ ಯಾರ ಹೆಸರನ್ನ ಎಲ್ಲಿ ಬೇಕಾದರೂ ಇಡಬಹುದು. ಆಯಾ ರಾಜ್ಯದವರ ಹೆಸರನ್ನ ಆಯಾ ರಾಜ್ಯದಲ್ಲಿಯೇ ಇಡಬೇಕು ಅಂತ ಏನಾದ್ರೂ ಇದೆಯಾ ಅಂತ ಪ್ರಶ್ನಿಸಿದರು.



