Connect with us

Dvgsuddi Kannada | online news portal | Kannada news online

ಕೊರೊನಾ ಹೆಚ್ಚಳ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್

ಪ್ರಮುಖ ಸುದ್ದಿ

ಕೊರೊನಾ ಹೆಚ್ಚಳ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್

ಡಿವಿಜಿ ಸುದ್ದಿ, ಮೈಸೂರು: ಜಿಲ್ಲಾದ್ಯಂತ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ಜುಲೈ10ರಿಂದ ಮುಂದಿನ ಆದೇಶದವರೆಗೆ ಹೊರ ಜಿಲ್ಲೆ, ರಾಜ್ಯ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಹೆಚ್.ಡಿ.ಕೋಟೆ ತಾಲೂಕಿನ ಎಲ್ಲ ಹೋಟೆಲ್, ರೆಸಾರ್ಟ್, ಲಾಡ್ಜ್, ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡಕೂಡದು. ಮುಂದಿನ ಹೊರಭಾಗದ ಪ್ರವಾಸಿಗರ ಆನ್‍ಲೈನ್ ಅಥವಾ ಆಫ್‍ಲೈನ್ ಮುಂತಾದ ರೂಪದ ಬುಕ್ಕಿಂಗ್ ಮಾಡಿಕೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ. 00

ಸದ್ಯ ವಸತಿ ಸೌಕರ್ಯ ಪಡೆದುಕೊಂಡಿರುವ ಪ್ರವಾಸಿಗರನ್ನು ಬಲವಂತವಾಗಿ ಕಳಿಸಕೂಡದು. ಅವರ ಬುಕ್ಕಿಂಗ್ ಅವಧಿ ಮುಗಿಯವರೆಗೂ ಸೇವೆ ನೀಡತಕ್ಕದ್ದು ಎಂದು ಆದೇಶಿಸಿದೆ. ಪ್ರವಾಸಿ ಉದ್ದೇಶಕ್ಕೆ ಮುಂಗಡ ಬುಕ್ಕಿಂಗ್ ಮಾಡಿ ಆಗಮಿಸಿರದಿದ್ದಲ್ಲಿ ಸೂಕ್ತ ಮಾಹಿತಿ ನೀಡಿ ಬುಕ್ಕಿಂಗ್ ರದ್ದುಗೊಳಿಸಬೇಕು.

ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿಗಳಿಗೂ ಸಹ ಅನ್ವಯವಾಗುತ್ತದೆ. ಮುಂದಿನ ಆದೇಶದವರೆಗೂ  ಇಡೀ ತಾಲೂಕಿನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top