ನವದೆಹಲಿ: ನಮ್ಮ ದೇಶದಲ್ಲಿ ಒಂದಲ್ಲ ಎರಡಲ್ಲ ಮೂರು ಕೊರೊನಾ ಲಸಿಕೆಗಳು ತಯಾರಾಗುತ್ತಿವೆ. ಲಸಿಕೆ ಉತ್ಪಾದನೆಗೆ ವಿಜ್ಞಾನಿಗಳಿಂದ ಗ್ರೀನ್ ಸಿಗ್ನಲ್ ಸಿಕ್ಕಿ ನಂತರ, ಅಧಿಕ ಪ್ರಮಾಣದಲ್ಲಿ ಉತ್ಪಾದನೆ ಮಾಡಿ ದೇಶ ವಾಸಿಗಳಿಗೆ ಹಂಚಿಕೆ ಮಾಡಲು ಮಾರ್ಗಸೂಚಿ ತಯಾರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ 7ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಮೋದಿ, ಪ್ರತಿಯೊಬ್ಬರು ಕೊರೊನಾಗೆ ಲಸಿಕೆ ಯಾವಾಗ ಬರುತ್ತದೆ ಎಂದು ಕೇಳುತ್ತಿದ್ದಾರೆ. ಆದರೆ, ದೇಶದಲ್ಲಿ ಮೂರು ಲಸಿಕೆಗೆಗಳು ವಿವಿಧ ಹಂತದ ಪ್ರಯೋಗದಲ್ಲಿದೆ. ವಿಜ್ಞಾನಿಗಳಿಂದ ಈ ಲಸಿಕೆಗೆ ಹಸಿರು ನಿಶಾನೆ ಸಿಕ್ಕಿದ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಕೈಗೊಳ್ಳಲಾಗುವುದು ಎಂದರು .

ಕೊರೊನಾ ವಾರಿಯರ್ಸ್ಗಳಿಗೆ ಗೌರವ ಸಲ್ಲಿಸಿ ಭಾಷಣ ಆರಂಭಸಿದ ಮೋದಿ ಕೊರೊನಾ ಬಂದ ಸಮಯದಲ್ಲಿ 3 ಸಾವಿರ ಮಂದಿಗೆ ಪ್ರತಿ ದಿನ ಪರೀಕ್ಷೆ ನಡೆಯುತ್ತಿತ್ತು. ಆದರೆ ಈಗ ಪ್ರತಿ ದಿನ 7 ಲಕ್ಷ ಮಂದಿಗೆ ಪರೀಕ್ಷೆ ಮಾಡುತ್ತಿದ್ದೇವೆ. ಆರಂಭದಲ್ಲಿ ಎನ್ 95 ಮಾಸ್ಕ್, ಪಿಪಿಇ ಕಿಟ್, ವೆಂಟಿಲೇಟರ್ಗಳು ಉತ್ಪಾದನೆ ಆಗುತ್ತಿರಲಿಲ್ಲ. ಆದರೆ ಈಗ ಇವುಗಳನ್ನು ಉತ್ಪಾದಿಸಲು ಸಾಮರ್ಥ್ಯ ಪಡೆದಿದ್ದೇವೆ. ಆತ್ಮ ನಿರ್ಭರ ಭಾರತದ ಕನಸು ನನಸು ಮಾಡಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಮೂಲಕ ಪ್ರತಿ ಭಾರತೀಯರಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ನೀಡಲು ಸರ್ಕಾರ ಮುಂದಾಗಿದೆ. ರೋಗಿಗಳ ಸಂಪೂರ್ಣ ಚಿಕಿತ್ಸೆಯ ವಿವರ ವೈದ್ಯರಿಗೆ ಇದರಿಂದ ಸಿಗಲಿದೆ ಎಂದು ತಿಳಿಸಿದರು.
Addressing the nation from the Red Fort. https://t.co/uHu73fOF17
— Narendra Modi (@narendramodi) August 15, 2020



