ನವದೆಹಲಿ: ಕಾಂಗ್ರೆಸ್ನ ಅಧ್ಯಕ್ಷ ಸ್ಥಾನ ಬಿಕ್ಕಟ್ಟು ಬಗೆಹರಿಸುವಂತೆ ಕೆಲವು ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಮತ್ತೊಂದು ಗುಂಪು ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಕರೆತರಲು ಒತ್ತಾಯಿಸಿದ್ದಾರೆ.
ಇದಕ್ಜೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದು, ಪಕ್ಷದ ನಾಯಕರೆಲ್ಲರೂ ಒಟ್ಟಿಗೆ ಸೇರಿ ಹೊಸ ಮುಖಂಡರನ್ನು ಗುರುತಿಸುವಂತೆ ಹೇಳಿದ್ದಾರೆ. ಜವಾಬ್ದಾರಿ ಮುಂದುವರಿಸುವ ಇಚ್ಛೆ ಇಲ್ಲ ಪಕ್ಷದ ಮೂಲಗಳು ತಿಳಿಸಿವೆ.

ಸೋಮವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಹೊರ ಬರಲಿದ್ದಾರೆ ಎಂದು ವರದಿಯಾಗಿದೆ.
ಗುಲಾಂ ನಬಿ ಆಜಾದ್,ಮನೀಶ್ ತಿವಾರಿ, ಮಿಲಿಂದ್ ದೇವ್ರಾ, ಜಿತಿನ್ ಪ್ರಸಾದ್ ಸೇರಿದಂತೆ 23 ನಾಯಕರು ಕಾಂಗ್ರೆಸ್ ಪಕ್ಷದ ವ್ಯವಸ್ಥೆಯಲ್ಲಿ ಬದಲಾವಣೆಗಾಗಿ ಆಗ್ರಹಿಸಿದ್ದಾರೆ.
ನೂತನ ಅಧ್ಯಕ್ಷರು ಗಾಂಧಿ ಕುಟುಂಬದಿಂದ ಹೊರತಾಗಿರುವವರೆಗೇ ಆಗಿರಬೇಕು ಎಂದು ಸೋನಿಯಾ ಗಾಂಧಿ ತಿಳಿಸಿರುವುದಾಗಿ ವರದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ಮೇ 25ರಂದು ರಾಜೀನಾಮೆ ಸಲ್ಲಿಸಿದ್ದರು. ಗಾಂಧಿ ಪರಿವಾರದ ಹೊರಗಿನ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು.



