Connect with us

Dvgsuddi Kannada | online news portal | Kannada news online

ಅನಿಲ ಸೋರಿಕೆ: ಮೃತಪಟ್ಟವರಿಗೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ಪ್ರಮುಖ ಸುದ್ದಿ

ಅನಿಲ ಸೋರಿಕೆ: ಮೃತಪಟ್ಟವರಿಗೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ವಿಶಾಖಪಟ್ಟಣಂ: ಆಂಧ್ರಪ್ರದೇಶದಲ್ಲಿ ಅನಿಲ ಸೋರಿಕೆಯಿಂದ  ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ ಮಾಡಿದ್ದಾರೆ.

ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಆರ್.ವೆಂಕಟಪುರಂನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿತ್ತು.  ಇದರಿಂದ 13 ಜನ ಸಾವನ್ನಪ್ಪಿದರೆ ಸುಮಾರು 5 ಸಾವಿರಕ್ಕೂ ಹೆಚ್ಚಿನ ಜನ ಅಸ್ವಸ್ಥರಾಗಿದ್ದಾರೆ.

ಸುದ್ದಿ ತಿಳಿದ ತಕ್ಷಣ  ಆಸ್ಪತ್ರೆಗೆ ಬಂದ ಜಗನ್ ಮೋಹನ್ ರೆಡ್ಡಿ, ಅಸ್ವಸ್ಥರ ಯೋಗಕ್ಷೇಮ ವಿಚಾರಿಸಿದರು. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ 1 ಕೋಟಿ ಹಾಗೂ ತೀವ್ರ ಅಸ್ವಸ್ಥರದವರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. ಜೊತೆಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ 1 ಲಕ್ಷ, ಈಗಾಗಲೇ ಚಿಕಿತ್ಸೆ ಪಡೆದು ಹೋದವರಿಗೆ 25 ಸಾವಿರ ನೀಡುವುದಾಗಿ ಘೋಷಿಸಿದರು.

ನಂತರ ಉನ್ನತ ಅಧಿಕಾರಿಗಳ ಜೊತೆ ಸಭೆ ಮಾಡಿದ ಜಗನ್ ಮೋಹನ್ ರೆಡ್ಡಿ, ಚಿಕಿತ್ಸೆ ಪಡೆಯುತ್ತಿರುವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದಾರೆ.  ಜೊತೆಗೆ ಈ ಸಭೆಯಲ್ಲಿ ಈ ದುರಂತಕ್ಕೆ ಏನೂ ಕಾರಣ ಎಂದು ತಿಳಿಯಲು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಮುಂಜಾನೆ ಸುಮಾರು 2.30ಕ್ಕೆ ಗ್ಯಾಸ್ ಲೀಕ್ ಆಗಿದ್ದು, ಬೆಳಗ್ಗೆ 5.30ಕ್ಕೆ ವಿಷಯ ತಿಳಿದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top