Connect with us

Dvgsuddi Kannada | online news portal | Kannada news online

ಅರುಣ್ ಜೇಟ್ಲಿ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ: ಪ್ರಧಾನಿ ಮೋದಿ

ರಾಷ್ಟ್ರ ಸುದ್ದಿ

ಅರುಣ್ ಜೇಟ್ಲಿ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ: ಪ್ರಧಾನಿ ಮೋದಿ

ನವದೆಹಲಿಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಪುಣ್ಯ ತಿಥಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಅವರಿಗೆ ಗೌರವ ಸಲ್ಲಿಸಿದ್ದಾರೆ.

ಅರುಣ್ ಜೇಟ್ಲಿ ಅವರನ್ನು ಕಳೆದುಕೊಂಡೆವು ಒಂದು ವರ್ಷವಾಗಿದೆ. ನನ್ನ ಸ್ನೇಹಿತನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅರುಣ್ ಜೀ ಶ್ರದ್ಧೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದರು. ಅವರ ಬುದ್ಧಿಶಕ್ತಿ ಮತ್ತು ವ್ಯಕ್ತಿತ್ವ ಗಮನಾರ್ಹವಾದದ್ದಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಮೂಲಕ ಗೌರವ ಸಲ್ಲಿಸಿರುವ ಅಮಿತ್ ಶಾ, ಉತ್ತಮ ನಾಯಕ, ಭಾರತ ರಾಜಕೀಯದಲ್ಲಿ ಸಾಟಿಯಿಲ್ಲದ ವ್ಯಕ್ತಿ, ಚತರ ವಾಗ್ಮಿ ಹಾಗೂ ಅತ್ಯುತ್ತಮ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅರುಣ್ ಜೇಟ್ಲಿ ಅವರನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಅವರು ಬಹುಮುಖಿ ಮತ್ತು ಸ್ನೇಹಿತರ ಸ್ನೇಹಿತರಾಗಿದ್ದವರು. ಅತ್ಯುನ್ನತ ಪರಂಪರೆ, ಪರಿವರ್ತಕ ದೃಷ್ಟಿಕೋನ ಮತ್ತು ದೇಶದ ಭಕ್ತಿಗಾಗಿ ಅವರು ಯಾವತ್ತೂ ನೆನಪಿನಲ್ಲಿ ಉಳಿಯುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್, ಮುಖ್ತಾರ್ ಅಬ್ಬಾಸ್ ನಖ್ವಿ ಸಹ ಅರುಣ್ ಜೇಟ್ಲಿ ಅವರಿಗೆ ಗೌರವ ಸಲ್ಲಿಸಿ ಟ್ವೀಟ್ ಮಡಿದ್ದಾರೆ.ದಿ. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ಮೊದಲ ಬಾರಿಗೆ ಜೇಟ್ಲಿ ಸಚಿವರಾಗಿದ್ದರು. 2009ರಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದರು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ರಚನೆಯಾದ ಸರ್ಕಾರದಲ್ಲಿ ಸಚಿವರಾಗಿದ್ದರು. ಅನಾರೋಗ್ಯದ ಕಾರಣ ನೀಡಿ 2019ರ ಚುನಾವಣೆಯಿಂದ ದೂರ ಉಳಿದಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top