ಸಿಬಿಐ ಅಧಿಕಾರಿಗಳ ದಾಳಿ: ಬರೋಬ್ಬರಿ 3 ಕೆ ಚಿನ್ನ, 2 ಕೆ.ಜಿ ಬೆಳ್ಳಿ, 1 ಕೋಟಿ ನಗದು ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಹೈದರಾಬಾದ್: ಆಂಧ್ರ ಪ್ರದೇಶದ ಕೈಮಗ್ಗ ಹಾಗೂ ನೇಕಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷನ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು 3 ಕೆ ಚಿನ್ನ, 2 ಕೆ.ಜಿ ಬೆಳ್ಳಿ, ಹಳೆ ಸಾವಿರ ರೂ. ಮುಖಬೆಲೆಯ ನೋಟು ಸೇರಿ 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ಆಂಧ್ರ ಪ್ರದೇಶದ ರಾಜ್ಯ ಕೈಮಗ್ಗ ಹಾಗೂ ನೇಕಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗುಜ್ಜಲ ಶ್ರೀನಿವಾಸ ಅವರ ಮನೆ ಕಡಪ ಜಿಲ್ಲೆಯ ಖಾಜಿಪೇಟೆಯ ಮನೆಯ ಮೇಲೆ ಅಧಿಕಾರಿಗಳು  ದಾಳಿ ನಡೆಸಿದ್ದಾರೆ.

cbi raid 2

ದಾಳಿ ವೇಳೆ ಗುಜ್ಜಲ ಶ್ರೀನಿವಾಸ ಅವರ ಮನೆಯಲ್ಲಿ 3 ಕೆ.ಜಿ.ಚಿನ್ನಾಭರಣ, 2 ಕೆ.ಜಿ.ಬೆಳ್ಳಿ, 1 ಕೋಟಿ ರೂ.ಗೂ ಅಧಿಕ ನಗದು ಹಾಗೂ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮನೆಯಲ್ಲಿ ಸಿಕ್ಕ ಹಣದಲ್ಲಿ ಹಳೆ ನೋಟುಗಳು ಸಹ ಪತ್ತೆಯಾಗಿವೆ. ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಸುಮಾರು 4 ಸಾವಿರ ಕೋಟಿ ರೂ.ಭ್ರಷ್ಟಾಚಾರ ನಡೆದಿದೆ ಎಂದು ಕೈಮಗ್ಗ ಪ್ರಾಥಮಿಕ ಸಹಕಾರ ಸಂಘಗಳ ಅಧ್ಯಕ್ಷರ ಒಕ್ಕೂಟವು ಶ್ರೀನಿವಾಸಯ್ಯ ವಿರುದ್ಧ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಅವರಿಗೆ ದೂರು ನೀಡಿತ್ತು. ಅಲ್ಲದೆ ಭ್ರಷ್ಟಾಚಾರ ಎಲ್ಲಿ ನಡೆದಿದೆ ಎಂಬ ವಿವರಗಳನ್ನು ಸಹ ದೂರಿನಲ್ಲಿ ತಿಳಿಸಲಾಗಿತ್ತು. ವಿಜಿಲೆನ್ಸ್ ಆ್ಯಂಡ್ ಎನ್‍ಫೋರ್ಸ್‍ಮೆಂಟ್ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ನಂತರ ಸಿಬಿಐ ಅಧಿಕಾರಿಗಳು ಶ್ರೀನಿವಾಸ್ ಅವರ ಮನೆಯ ಶೋಧ ನಡೆಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *