Connect with us

Dvgsuddi Kannada | online news portal | Kannada news online

ಗಡಿಯಲ್ಲಿ ಮತ್ತೆ ಚೀನಾ ಕಿರಿಕ್: ಭಾರತೀಯ ಸೇನೆಯ ಮೂವರು ಹುತಾತ್ಮ  

ಪ್ರಮುಖ ಸುದ್ದಿ

ಗಡಿಯಲ್ಲಿ ಮತ್ತೆ ಚೀನಾ ಕಿರಿಕ್: ಭಾರತೀಯ ಸೇನೆಯ ಮೂವರು ಹುತಾತ್ಮ  

ನವದೆಹಲಿಚೀನಾ ಗಡೆಯಲ್ಲಿ ಮತ್ತೆ ಕಿರಿಕ್ ಶುರು ಮಾಡಿದೆ. ಸೇನಾಪಡೆಗಳೊಂದಿಗೆ ಸೋಮವಾರ  ರಾತ್ರಿ ಲಡಾಖ್‌ನ ಪೂರ್ವಭಾಗದ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಸಂಘರ್ಷದಲ್ಲಿ ಚೀನಾದ ಸೇನೆಗೂ ಹಾನಿಯಾಗಿದೆ.

ಚೀನಾ-ಭಾರತ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸುವ ಸಲುವಾಗಿ ಉಭಯ ದೇಶಗಳ ಸೇನಾಪಡೆ ಅಧಿಕಾರಿಗಳು ಗಲ್ವಾನ್‌ನಲ್ಲಿ ಸಭೆ ನಡೆಸಿದರು. ಭಾರತ ಮತ್ತು ಚೀನಾದ ಪಡೆಗಳು ಕೆಲವು ವಾರಗಳಿಂದ ಗಲ್ವಾನ್‌ ಕಣಿವೆಯಲ್ಲಿಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ.

ವಿವಾದಿತ ಗಡಿ ಪ್ರದೇಶ ದಾಟಿ ಭಾರತೀಯ ಸೇನೆಯೇ ನಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ ಎಂದು ಚೀನಾ ಆರೋಪಿಸಿದೆ. ನಮ್ಮ ಸೇನಾ ಪಡೆಗಳನ್ನು ಪ್ರಚೋದಿಸಿದ್ದಲ್ಲದೆ, ದಾಳಿ ಮಾಡಿದ್ದವು. ಪರಿಣಾಮವಾಗಿ ಚಕಮಕಿ ನಡೆದು ಎರಡೂ ದೇಶಗಳ ಯೋಧರಿಗೆ ಹಾನಿಯಾಗುವಂತಾಯಿತು ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಆರೋಪಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top