Connect with us

Dvgsuddi Kannada | online news portal | Kannada news online

ಚೀನಾದ 40 ಯೋಧರು ಮೃತ: ಸಚಿವ ವಿ.ಕೆ.ಸಿಂಗ್

ಪ್ರಮುಖ ಸುದ್ದಿ

ಚೀನಾದ 40 ಯೋಧರು ಮೃತ: ಸಚಿವ ವಿ.ಕೆ.ಸಿಂಗ್

ಮುಂಬೈ: ಗಾಲ್ವನ್ ಕಣಿವೆ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ ಚೀನಾದ  40 ಯೋಧರು ಮೃತಪಟ್ಟಿರಬಹುದು ಎಂದು ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್  ಹೇಳಿದ್ದಾರೆ.

ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು,  ಚೀನಾ  ತನ್ನ ದೇಶದಲ್ಲಿ ಎಷ್ಟು ಸೈನಿಕರು ಮೃತಪಟ್ಟಿದ್ದಾರೆ ಎನ್ನುವ  ಮಾಹಿತಿ ನೀಡಿಲ್ಲ.

ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ‌. ಇದರ ದುಪ್ಪಟ್ಟು ಸಾವು ಚೀನಾದಲ್ಲಿ ಆಗಿದೆ ಎಂದು ಖಾಸಗಿ  ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ  ಹೇಳಿದ್ದಾರೆ.

1962ರ ಯುದ್ಧ ಸೇರಿದಂತೆ ಚೀನಾ ದೇಶವು ಯಾವ ಯುದ್ಧದಲ್ಲಿ ಸಾವುನೋವಿನ ಮಾಹಿತಿ ಪ್ರಕಟಿಸಿದ ಉದಾಹರಣೆಯೇ ಇಲ್ಲ ಎಂದಿದ್ದಾರೆ.  ಚೀನಾದ ಕಡೆ ಸಾವುನೋವು ಸಂಭವಿಸಿವೆ ಎಂದು ಚೀನಾ ಸರ್ಕಾರಿ ನಿಯಂತ್ರಿತ ಗ್ಲೋಬಲ್ ಟೈಮ್ಸ್ ವರದಿ ಮಾಡಿತ್ತು. ಎಷ್ಟು ಎಂದು ತಿಳಿಸಿಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top