ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
ಶಿವಾಜಿ ಅವರು ಧೈರ್ಯದ ಸಾಕಾರ ಮೂರ್ತಿ, ಸಹಾನುಭೂತಿ ಮತ್ತು ಉತ್ತಮ ಆಡಳಿತಗಾರ. ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮ ವಾರ್ಷಿಕೋತ್ಸವದ ನಮನಗಳು. ಅವರ ಅಸಾಧಾರಣ ಜೀವನವು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ. ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Chhatrapati Shivaji Maharaj made a mark as a valorous warrior and an outstanding administrator. From building a strong navy to ushering several pro-people policies, he was outstanding in all spheres. He will always be remembered for his opposition to injustice and intimidation.
— Narendra Modi (@narendramodi) February 19, 2020
ಛತ್ರಪತಿ ಶಿವಾಜಿ ಮಹಾರಾಜ್ ಒಬ್ಬ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರ. ಬಲಿಷ್ಠ ನೌಕಾಪಡೆ ನಿರ್ಮಿಸುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಜಾರಿಗೆ ತಂದಿದ್ದಾರೆ. ಅನ್ಯಾಯ ಮತ್ತು ಬೆದರಿಕೆಗಳನ್ನು ವಿರೋಧಿಸಿದ್ದಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಬೇಕಿದೆ ಎಂದಿದ್ದಾರೆ.



