ನವದೆಹಲಿ : ಬೆಂಗಳೂರಿನ ಬೊಮ್ಮಸಂದ್ರ ವ್ಯಾಪ್ತಿಯ ಕಿತ್ತಗಾನಹಳ್ಳಿ ಕೆರೆಯಲ್ಲಿ ಮಾಲಿನ್ಯ ನಿಯಂತ್ರಣ ಸಮರ್ಪಕವಾಗಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಕರ್ನಾಟಕ ರಾಜ್ಯ ಸರ್ಕಾರಕ್ಕೆ 10 ಲಕ್ಷ, ಮತ್ತು ಬೊಮ್ಮಸಂದ್ರ ಪುರಸಭೆಗೆ 5 ಲಕ್ಷ ದಂಡ ವಿಧಿಸಿದೆ.
ಕೆರೆಗೆ ಮಾಲಿನ್ಯಕಾರಕ ವಸ್ತುಗಳು ಸೇರುವುದನ್ನು ತಡೆಯುವಲ್ಲಿ ಸರ್ಕಾರ ವಿಫವಾಗಿದೆ. ಇದೊಂದು ಕ್ರಿಮಿನಲ್ ಅಪರಾಧ ಎಂದಿದೆ. ಕೆರೆಯಲ್ಲಿ ತ್ಯಾಜ್ಯ ಸುರಿಯುತ್ತಿರುವುದರಿಂದ ಮಾಲಿನ್ಯವಾಗುತ್ತಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ಸಂಜಯ್ ರಾವ್ ಸೇರಿದಂತೆ ಇತರರು ಅರ್ಜಿ ಸಲ್ಲಿಸಿದ್ದರು.
ಎನ್ಜಿಟಿ ಅಧ್ಯಕ್ಷ, ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ, ಬೊಮ್ಮಸಂದ್ರ ಪುರಸಭೆಯು ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ, ಪುರಸಭೆಗೂ 5 ಲಕ್ಷ ದಂಡ ವಿಧಿಸಿದೆ.



