ಪ್ರಮುಖ ಸುದ್ದಿ
ಇಂದು ಸಂಜೆ 4 ಗಂಟೆಗೆ 20 ಲಕ್ಷ ಕೋಟಿ ಪ್ಯಾಕೇಜ್ ಮಾಹಿತಿ ನೀಡಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಹಂಚಿಕೊಳ್ಳಲಿದ್ದಾರೆ.
Finance Minister Smt. @nsitharaman will address a Press Conference today, 13th May 2020, at 4 PM in New Delhi.#EconomicPackage#AatmanirbharBharat #AatmaNirbharBharatAbhiyan #IndiaFightsCorona pic.twitter.com/FmKcItA23C
— Ministry of Finance 🇮🇳 #StayHome #StaySafe (@FinMinIndia) May 13, 2020
ದೇಶವನ್ನು ಉದ್ದೇಶಿಸಿ ನಿನ್ನೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ವೈರಸ್ ತಡೆಯಲು ಘೋಷಿಸಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿದ್ದ ಆರ್ಥಿಕ ಪುನಶ್ಚೇತನ ಮತ್ತು ಬಡವರಿಗೆ ನೆರವಾಗಲು ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ತಮ್ಮ ಭಾಷಣದಲ್ಲಿಯೇ ಪ್ಯಾಕೇಜ್ ವಿವರಗಳನ್ನು ಹಣಕಾಸು ಸಚಿವರು ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದ್ದರು.
ಪ್ರಧಾನಿ ಭಾಷಣದ ನಂತರ ಸರಣಿ ಟ್ವೀಟ್ ಮಾಡಿದ್ದ ಹಣಕಾಸು ಸಚಿವರು, ಇದು ಕೇವಲ ಪ್ಯಾಕೇಜ್ ಅಲ್ಲ, ಆರ್ಥಿಕ ಸ್ಥಿತಿ ಸುಧಾರಣೆಗೆ ಮುನ್ನುಡಿ ಆಗಲಿದೆ ಎಂದಿದ್ದಾರೆ. ಪ್ರಧಾನಿ ಘೋಷಿಸಿದ ಆತ್ಮನಿರ್ಭರ ಭಾರತ ಅಭಿಯಾನವು ಬೀದಿ ವ್ಯಾಪಾರಿಗಳು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳು, ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವ ಮಧ್ಯಮ ವರ್ಗ, ತಯಾರಿಕೆದಾರರು ಸೇರಿದಂತೆ ಎಲ್ಲರನ್ನೂ ಒಳಗೊಳ್ಳಲಿದೆ ಎಂದು ಹೇಳಿದ್ದಾರೆ.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
ಬೆಂಗಳೂರು: ರಾಜ್ಯದಲ್ಲಿ ಮೇ ತಿಂಗಳಲ್ಲಿ ಅಬ್ಬರಿಸಿದ್ದ ಮಳೆ, ನೈಋತ್ಯ ಮಾನ್ಸೂನ್ (monsoon rain) ಪ್ರವೇಶ ಪಡೆಯುತ್ತಿದ್ದಂತೆ ಸೈಲೆಂಟ್ ಆಗಿತ್ತು. ಇದೀಗ ಇಂದಿನಿಂದ...
ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...
ಈ ರಾಶಿಯವರಿಗೆ ಆಸ್ತಿ ಮಾರಾಟ ವಿಳಂಬ, ಈ ರಾಶಿಯವರಿಗೆ ಆರೋಗ್ಯದಲ್ಲಿ ಸಮಸ್ಯೆ, ಈ ರಾಶಿಯವರಿಗೆ ಕುಟುಂಬದಲ್ಲಿ ಪದೇಪದೇ ಕಲಹ, ಸೋಮವಾರದ ರಾಶಿ...
ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಮುನ್ನ ಪ್ರವೇಶಿಸಿ ಅಬ್ಬರಿಸಿದ್ದ ನೈಋತ್ಯ ಮಾನ್ಸೂನ್ (monsoon rain) ಈಗ ದುರ್ಬಲಗೊಂಡಿದೆ. ಜೂ.9 ರಿಂದ ದುರ್ಬಲಗೊಂಡ ಮುಂಗಾರು...
ಬೆಂಗಳೂರು; ಮೇ ತಿಂಗಳ ಅಂತ್ಯದಲ್ಲಿ ಮುಂಗಾರು ಪೂರ್ವ ಭಾರೀ ಮಳೆಯಿಂದ ರಾಜ್ಯದೆಲ್ಲಡೆ ಅವಾಂತರ ಸೃಷ್ಟಿಸಿತ್ತು. ಆದರೀಗ, ರಾಜ್ಯದಲ್ಲಿ ಮುಂಗಾರು ಮಳೆ (monsoon...