ಜೈಪುರ: ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಸಚಿನ್ ಪೈಲಟ್, ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದಾರೆ.
ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದ, ಪೈಲಟ್ ಸಹಿತ ಅವರ ಬೆಂಬಲಿಗರು ದೆಹಲ್ಲಿದ್ದು ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿ ಹರಡಿದೆ. ಕಾಂಗ್ರೆಸ್ ನಾಯಕರು ಸಹ ನಿನ್ನೆ ಸಭೆಯಲ್ಲಿ ಇದೇ ಆರೋಪ ಮಾಡಿದ್ದರು. ಇದೀಗ ಪೈಲಟ್ ಎಲ್ಲ ಆರೋಪಗಳಿಗೆ ತೆರೆ ಎಳೆದಿದ್ದಾರೆ
ನಾನು ಬಿಜೆಪಿ ಸೇರುತ್ತಿಲ್ಲ. ಈ ಕುರಿತು ಸುಳ್ಳು ಸುದ್ದಿ ಹರಡಲಾಗುತ್ತಿದೆ. ನಾನು ಬಿಜೆಪಿ ಸೇರುವ ಯಾವುದೇ ನಿರ್ದಾರ ಕೈಗೊಂಡಿಲ್ಲ. ಎಲ್ಲ ಆರೋಪಗಳನ್ನು ಅವರು ಅಲ್ಲಗಳೆದಿದ್ದಾರೆ.ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ನ ಎರಡೂ ಶಾಸಕಾಂಗ ಪಕ್ಷದ ಸಭೆಗೆ ಪೈಲಟ್ ಹಾಜರಾಗಿರಲಿಲ್ಲ. ಇದರಿಂದ ನಿನ್ನೆ ವಜಾಗೊಳಿಸಲಾಗಿದೆ.



