Connect with us

Dvgsuddi Kannada | online news portal | Kannada news online

ಕೊರೊನಾ ವೈರಸ್ ನಿಯಂತ್ರಣಕ್ಕೆ ಜನತೆಗೆ ಸಪ್ತ ಸೂತ್ರ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಪ್ರಮುಖ ಸುದ್ದಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಜನತೆಗೆ ಸಪ್ತ ಸೂತ್ರ ಹೇಳಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ:  ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಮೇ 3 ವರೆಗೆ ಲಾಕ್ ಡೌನ್ ಮುಂದುವರಿಸಿದ್ದಾರೆ. ಈ ವೇಳೆ ಕೊರೊನಾ ನಿಯಂತ್ರಣಕ್ಕೆ  ಮೋದಿ ಅವರು  ಸಪ್ತ ಸೂತ್ರಗಳನ್ನು ಸೂಚಿಸಿದ್ದಾರೆ.

pm modi dvgsuddi

ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದೇಶದಾದ್ಯಂತ ಕೊರೊನಾ ನಿಯಂತ್ರಿಸಲು ಲಾಕ್‍ಡೌನ್ ಅನಿವಾರ್ಯವಾಗಿದೆ. ಲಾಕ್‍ಡೌನ್ ಪಾಲನೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಮತ್ತಷ್ಟು ನಿಯಂತ್ರಿಸಲು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸುತ್ತಿದ್ದೇನೆ ಎಂದರು.

ಮೋದಿಯ ಏಳು ಸೂತ್ರಗಳು:
1. ಮನೆಯಲ್ಲಿರುವ ವೃದ್ಧರ ಬಗ್ಗೆ ಕಾಳಜಿ ವಹಿಸಿ.
2 ರೋಗ ಇದ್ದವರಿಗೆ ಜಾಗೃತಿ ವಹಿಸಿ, ಅವರನ್ನು ಕೊರೊನಾದಿಂದ ರಕ್ಷಿಸಿ.
3. ಸಾಮಾಜಿಕ ಅಂತರ ಮತ್ತು ಲಾಕ್‍ಡೌನ್ ನಿಮಯ ಪಾಲಿಸಿ, ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಬಳಸಿ.
4. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಿಕೊಳ್ಳಿ.
5. ಆರೋಗ್ಯ ಸೇತು ಆಪ್ ಡೌನ್‍ಲೌಡ್ ಮಾಡಿಕೊಂಡು ಇತರಿಗೆ ಪ್ರೇರೇಪಿಸಿ.
6. ಬಡ ಕುಟುಂಬಗಳಿಗ ನೆರವು ನೀಡಿ
7. ಕೆಲಸದಿಂದ ಯಾರನ್ನು ತೆಗೆಯಬೇಡಿ

ಈ ರೀತಿ ಮೋದಿ ಕೊರೊನಾ ವಿರುದ್ಧ ಹೋರಾಟಕ್ಕೆ  ಏಳು ಸೂತ್ರಗಳನ್ನು ಜನತೆಗೆ  ಸೂಚಿಸಿದ್ದಾರೆ. ಅಲ್ಲದೇ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಜನರನ್ನ ಗೌರವಿಸಬೇಕು ಎಂದು ಕೂಡ ಸೂಚಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top