Connect with us

Dvgsuddi Kannada | online news portal | Kannada news online

ವಿಡಿಯೋ: ನನ್ನನ್ನು ಯಾವ ಕೋರ್ಟ್ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ; ನಾನು ಪರಮಶಿವ-ನಿತ್ಯಾನಂದ

ರಾಷ್ಟ್ರ ಸುದ್ದಿ

ವಿಡಿಯೋ: ನನ್ನನ್ನು ಯಾವ ಕೋರ್ಟ್ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ; ನಾನು ಪರಮಶಿವ-ನಿತ್ಯಾನಂದ

 ನವದೆಹಲಿ: ಯಾವ ನ್ಯಾಯಾಲಯವೂ ನನ್ನನ್ನು ವಿಚಾರಣೆಗೊಳಪಡಿಸಲು ಸಾಧ್ಯವಿಲ್ಲ. ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ನಿಮಗೆ ನಿಜ ಹೇಳುತ್ತೇನೆ. ನಾನು ಪರಮಶಿವ- ಅರ್ಥವಾಯಿತೇ? ನಿಜ ಬಾಯಿ ಬಿಡಿಸಲು ಯಾವ ಮೂರ್ಖ ನ್ಯಾಯಾಲಯವೂ ನನ್ನನ್ನು ವಿಚಾರಣೆಗೊಳಪಡಿಸಬೇಕಿಲ್ಲ ಎಂದಿರುವ ಅಘೋಷಿತ ದೇವ ಮಾನವ ನಿತ್ಯಾನಂದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಸಖತ್ ವೈರಲ್ ಆಗಿದೆ.

ಸ್ವಯಂ ಘೋಷಿತ ದೇವ ಮಾನವ, ಅತ್ಯಾಚಾರ ಆರೋಪ ಎದುರಿಸುತ್ತಿರುವ ನಿತ್ಯಾನಂದ,  ಸ್ವಂತ ದೇಶ ಸ್ಥಾಪಿಸಿರುವುದಾಗಿ ಹೇಳಿಕೊಂಡ ಭಾರೀ ಸುದ್ದಿಯಾಗಿದ್ದ, ಇದರ ಬೆನ್ನಲ್ಲಿಯೇ ಇದೀಗ ಅಜ್ಞಾತ ಸ್ಥಳದಿಂದ ನಿತ್ಯಾನಂದ ಈ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಗೆ ಸವಾಲು ಎಸೆಯುವಂತೆ ಹೇಳಿಕೆ ನೀಡಿದ್ದಾನೆ.

ನಾನು ಪರಮಶಿವ ಯಾರಿಂದಲೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಯಾವುದು ಸತ್ಯವೇನೆಂಬುದನ್ನು ನಾನು ಜಗತ್ತಿಗೆ ತೋರಿಸುತ್ತೇನೆ. ಈ ಮೂಲಕ ನನ್ನ ಅಂತರತ್ವವನ್ನು ತೋರಿಸುತ್ತೇನೆ. ಈಗ ಎಂದು ವಿಡಿಯೋದಲ್ಲಿ ನಿತ್ಯಾನಂದ ಹೇಳಿಕೊಂಡಿದ್ದಾನೆ.

ನಿತ್ಯಾನಂದನ ವೀಸಾ ಅವಧಿ ಮುಕ್ತಾಯವಾಗಿದ್ದು, ನವೀಕರಿಸುವ ಅರ್ಜಿ ತಿರಸ್ಕರಿಸಲಾಗಿದೆ. ಇದರ ನಡುವೆಯೂ ನಿತ್ಯಾನಂದ ಈಕ್ವೇಡಾರ್ ನಲ್ಲಿ ಅವಿತುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅಲ್ಲಿಯೇ ದೇಶವನ್ನೂ ಹೊಸ ದೇಶ ನಿರ್ಮಿಸುವ  ಸಿದ್ಧತೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಈ ಕುರಿತು ಈಕ್ವೇಡಾರ್ ಸರ್ಕಾರ ಸ್ಪಷ್ಟಪಡಿಸಿದ್ದು, ನಿತ್ಯಾನಂದ ಹಾಗೂ ನಮ್ಮ ದೇಶಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement

ದಾವಣಗೆರೆ

Advertisement
To Top