ಡಿವಿಜಿ ಸುದ್ದಿ, ಬೆಂಗಳೂರು: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಇದು ಯಾವುದೇ ರೀತಿಯ ಭಾರತ್ ಬಂದ್ ಅಲ್ಲ, ಕೇಲವ ಮುಷ್ಕರ ಅಷ್ಟೇ ಎಂದು ಸಂಘಟನೆಗಳ ಸ್ಪಷ್ಟಪಡಿಸಿವೆ.
ಎಂದಿನಂತೆ ಬಸ್, ಆಟೊ, ಟ್ಯಾಕ್ಸಿ, ಸರಕು ಸಾಗಣೆ, ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಶಾಲೆ, ಕಾಲೇಜು, ಸರಕಾರಿ ಕಚೇರಿಗಳು ಕೂಡಾ ಎಂದಿನಂತೆಯೇ ಕಾರ್ಯ ನಿರ್ವಹಿಸುತ್ತವೆ.
ಬಸ್, ಆಟೊ, ಟ್ಯಾಕ್ಸಿ, ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸುವುದಿಲ್ಲ. ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಉಳಿದಂತೆ ಯಾವುದೇ ಸೇವೆಗಳು ಬಂದ್ ಆಗುವುದಿಲ್ಲ. ಸಾರಿಗೆ ಸಂಸ್ಥೆ ನೌಕರರು ಅಲ್ಲಲ್ಲಿ ಧರಣಿ ನಡೆಸಲಿದ್ದಾರೆ.
– ಎಚ್.ವಿ. ಅನಂತಸುಬ್ಬರಾವ್, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ
ದುಡಿಯುವ ಜನರ ಹಕ್ಕುಗಳನ್ನು ಸಂರಕ್ಷಿಸಬೇಕು. ಪರ್ಯಾಯ ಆರ್ಥಿಕ ನೀತಿಗಳನ್ನು ಜಾರಿಗೆ ತರಬೇಕು. ಎಲ್ಲ ಕಾರ್ಮಿಕರಿಗೆ ಕನಿಷ್ಠ 21 ಸಾವಿರ ರೂ. ವೇತನ ನಿಗದಿ ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ.
ಈ ಮುಷ್ಕರಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಟನೆಗಳು, ಆಟೊ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಮತ್ತು ಸರಕು ಸಾಗಣೆ ಚಾಲಕರು ಮತ್ತು ಮಾಲೀಕರ ಸಂಘಗಳು ಮುಷ್ಕರಕ್ಕೆ ಬಾಹ್ಯ ಬೆಂಬಲ ನೀಡಿವೆ. ಆದರೆ, ಸೇವೆ ಸ್ಥಗಿತಗೊಳಿಸಿ, ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ. ಹೀಗಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು, ಆಟೊ, ಟ್ಯಾಕ್ಸಿ, ಸರಕು ಸಾಗಣೆ ವಾಹನ ಸೇವೆಯಲ್ಲಿ ಯಾವುದೇ ವ್ಯತ್ಯ ಉಂಟಾಗುವುದಿಲ್ಲ.



