ಪಾದರಾಯನಪುರ ಆರೋಪಿಗಳಲ್ಲಿ 5 ಮಂದಿಗೆ ಕೊರೊನಾ ಪಾಸಿಟಿವ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಪಾದರಾಯನಪುರ ಘಟನೆಯಲ್ಲಿ ಆರೋಪಿಗಳಾಗಿ ರಾಮನಗರ ಜೈಲಿನಲ್ಲಿವ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿ ಬಳಿಕ ಮಾತನಾಡಿದ ಅವರು, ರಾಮನಗರದಲ್ಲಿರುವ ಖೈದಿಗಳನ್ನು ವರ್ಗಾಯಿಸಲೊಉ ವಿರೋಧವಿತ್ತು. ಪರಪ್ಪನ ಅಗ್ರಹಾರ ದೊಡ್ಡ ಜೈಲು, ರಾಮನಗರ ಚಿಕ್ಕ ಜೈಲು. ಹೀಗಾಗಿ ಪಾದರಾಯನಪುರದ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ ಇಡಲಾಯ್ತು. ಇದೀಗ ಅವರನ್ನು  ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಮಾಹಿತಿ ನೀಡಿದರು.

ರಾಮನಗರ ಜೈಲಿನ 19 ಮಂದಿ ಖೈದಿಗಳನ್ನು ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗುವುದು.  ಪಾಸಿಟಿವ್ ಬಂದಿರುವ 5 ಮಂದಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡುತ್ತೇವೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುತ್ತೇವೆ ಎಂದರು.

ಪಾದರಾಯನಪುರದ 121 ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಅದರಲ್ಲಿ ಇಬ್ಬರು ಆರೋಪಿಗಳಿಗೆ ಸೋಂಕಿನ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಗುರುವಾರ ತಡರಾತ್ರಿಯೇ ಇಬ್ಬರು ಸೋಂಕಿತ ಆರೋಪಿಗಳನ್ನು ಆರೋಗ್ಯ ಸಿಬ್ಬಂದಿ ಶಿಫ್ಟ್ ಮಾಡಿದ್ದರು. ಜೈಲಿನಿಂದ ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತರ ಶಿಫ್ಟ್ ಮಾಡಿದ್ದು, ಆರೋಗ್ಯ ಸಿಬ್ಬಂದಿ ಮತ್ತು ಜಿಲ್ಲಾಡಳಿತ ಜೈಲಿನ ಸುತ್ತಮುತ್ತ ಸೀಲ್‍ಡೌನ್ ಮಾಡಲಾಗಿದೆ. ಇಬ್ಬರು ಸೋಂಕಿತರಿಂದ  ಮತ್ತೆ ಮೂವರಿಗೆ  ಸೋಂಕು ತಗುಲಿದ್ದು, ಒಟ್ಟು 5 ವರಿಗೆ ಸೋಂಕು ತಗುಲಿದೆ ಎಂದರು.

 

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *