Connect with us

Dvgsuddi Kannada | online news portal | Kannada news online

ಅಮಿತ್ ಶಾ ಭೇಟಿ ಮಾಡಿದ ವಿಜಯೇಂದ್ರ  

ರಾಜಕೀಯ

ಅಮಿತ್ ಶಾ ಭೇಟಿ ಮಾಡಿದ ವಿಜಯೇಂದ್ರ  

ನವದೆಹಲಿ: ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಿ.ಎಸ್ ಯಡಿಯೂರಪ್ಪ ಪುತ್ರ  ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿದ್ದು, ಅವರ ದಿಟ್ಟತನ, ಸಂಘಟನಾ ಚಾತುರ್ಯ, ಛಲವಂತಿಕೆ, ನಾಯಕತ್ವ ನನ್ನನ್ನೂ ಸೇರಿದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಪ್ರೇರಣೆ ಎಂದಿದ್ದಾರೆ.

ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು ಸಾಧಿಸಿದ್ದು, ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಖಾತೆ ತೆರಯವಲ್ಲಿ ವಿಜಯೇಂದ್ರ ಕಾರ್ಯತಂತರ ರೂಪಿಸಿದ್ದರು. ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಜಯ ಗಳಿಸುವಲ್ಲಿ ವಿಜಯೇಂದ್ರ ಪಾತ್ರ ಪ್ರಮುಖವಾಗಿದೆ

ಕೆ.ಆರ್ ಪೇಟೆ ಕ್ಷೇತ್ರದಲ್ಲಿ 15 ದಿನಗಳ ಕಾಲ ವಾಸ್ತವ್ಯ ಹೂಡಿದ್ದ ವಿಜಯೇಂದ್ರ, ಪಕ್ಷ  ಸಂಘಟನೆಗೆ ಹೆಚ್ಚಿನ ಹೊತ್ತು ನೀಡಿದ್ದರು.ಈ ನಿಟ್ಟಿನಲ್ಲಿ ಬಿಜೆಪಿ ಹೈ ಕಮಾಂಡ್  ಮೆಚ್ಚುಗೆ  ವ್ಯಕ್ತಪಡಿಸಿತ್ತು.  ಅಮಿತ್ ಶಾ ಸ್ವತಃ ವಿಜಯೇಂದ್ರಗೆ ಕರೆ ಮಾಡಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ಭದ್ರವಾಗಿದ್ದು, ಕಾಂಗ್ರೆಸ್ ಕೇವಲ 2 ಸ್ಥಾನ ಪಡೆದರು ಜೆಡಿಎಸ್ ಶೂನ್ಯ ಫಲಿತಾಂಶ ಬಂದಿತ್ತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top