ಸಂಪುಟ ವಿಸ್ತರಣೆಯಲ್ಲಿ ಹಿರಿತನ, ಸಾಮಾಜಿಕ ನ್ಯಾಯಕ್ಕೆ ಗೌರವ ನೀಡಿಲ್ಲ: ಅಪ್ಪಚ್ಚು ರಂಜನ್ ಅಸಮಾಧಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮಡಿಕೇರಿಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿತನ, ಮತ್ತು ಸಾಮಾಜಿಕ ನ್ಯಾಯಕ್ಕೆ ಗೌರವ ನೀಡಿಲ್ಲ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್  ಅಸಮಾಧಾನ ಹೊರಹಾಕಿದ್ದಾರೆ.

ಸಂಪುಟದಲ್ಲಿ ಕೊಡಗು ಜಿಲ್ಲೆಯ ಶಾಸಕರನ್ನು ಕಡೆಗಣಿಸಲಾಗಿದೆ. ನಾನು ಐದು ಬಾರಿ ಗೆದ್ದು ಶಾಸಕನಾಗಿದ್ದರೂ ಪರಿಗಣಿಸಿಲ್ಲ. ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಹಿರಿಯ ಶಾಸಕರಿಗೆ ಗೌರವ ಇಲ್ಲದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಜನರು ಬೀದಿಗೆ ಇಳಿದು ಹೋರಾಟ ನಡೆಸಲು ಮುಂದಾಗಿದ್ದರು. ನಾನೇ ಬೇಡವೆಂದು ತಡೆದಿದ್ದೇನೆ ಎಂದರು.

ಬೇರೆ ಪಕ್ಷದಿಂದ 17 ಮಂದಿ ಬಂದಿರುವುದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅದರಲ್ಲಿ ಎರಡು ಮಾತಿಲ್ಲ. ಆದರೆ,  ಜಿಲ್ಲಾವಾರು ಆದ್ಯತೆ ನೀಡಬೇಕಿತ್ತು.ಈ ತಪ್ಪು ಸರಿಪಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಮುಂದಿನ ನಿರ್ಧಾರದ ಕುರಿತು ಚಿಂತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *