ಚಿಲ್ಲರೆ, ಬೀದಿ ನಾಯಿ ಹೇಳಿಕೆಗೆ ಪ್ರತಿಕ್ರಿಯೆ ಅಗತ್ಯವಿಲ್ಲ: ನಿರಾಣಿ ಸಹೋದರಿಗೆ ಯತ್ನಾಳ್ ಗುದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ವಿಜಯಪುರ: ಹರ ಜಾತ್ರಾ ಮಹೋತ್ಸವದಲ್ಲಿ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದ ಶ್ರೀ ವಚನಾನಂದ ಸ್ವಾಮೀಜಿ  ಮಾತು, ಇದೀಗ ರಾಜಕೀಯ ದ್ವೇಷಕ್ಕೆ ಕಾಣವಾಗಿದೆ.  ಕೇಂದ್ರದ ಮಾಜಿ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ತೀರ ವೈಯಕ್ತಿಕವಾಗಿ ಟೀಕೆ ಮಾಡಿಕೊಂಡಿದ್ದಾರೆ.

ಯತ್ನಾಳ್   ನಮ್ಮ ಮನೆ ಬೆಕ್ಕು, ನಾಯಿಯ ಕಾಲು ಹಿಡಿದಿದ್ದ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಮುರುಗೇಶ್ ನಿರಾಣಿ ಸೋದರ ಸಂಗಮೇಶ್ ನಿರಾಣಿ ಹೇಳಿಕೆಗೆ ಬಸವನಗೌಡ ಯತ್ನಾಳ್ ತಿರುಗೇಟು ನೀಡಿದ್ದು,  ಚಿಲ್ಲರೆ ವ್ಯಕ್ತಿ, ಬೀದಿ ನಾಯಿಗಳ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಬಿಜಾಪುರದಲ್ಲಿ ಈ ಬಗ್ಗೆ ಮಾತನಾಡಿದ ಬಸನಗೌಡ ಪಾಟೀಲ್,  ನಾನು ಬೀದಿ ಬದಿ ಹೋಗುವವರು ಉತ್ತರ ಕೊಡುವುದಿಲ್ಲ. ಅವರಿವರ ಆಹ್ವಾನ ಸ್ವೀಕರಿಸಲು ನಾನೇನು ರೋಡ್ ಚಾಪ್ ಲೀಡರ್ ಅಲ್ಲ. ನಾನು ಬೀದಿ ನಾಯಿಗಳಿಗೆಲ್ಲ ಉತ್ತರ ಕೊಡಲ್ಲ. ಬೀದಿ ನಾಯಿಗಳಿಗೆ ಉತ್ತರ ಕೊಡದಂತೆ ನಮ್ಮ ಹಿರಿಯರು ಹೇಳಿ ಕೊಟ್ಟಿದ್ದಾರೆ ಎಂದರು.

ರಾಜಕಾರಣದಲ್ಲಿ ನನ್ನ ವಿರುದ್ಧ ಬಾಯಿ ಹರಿಬಿಟ್ಟರೇ ನನ್ನ ಬಳಿ ಇರುವ ಅವರ ಬಹುದೊಡ್ಡ ಜಾತಕ ಹರಿಬಿಡುತ್ತೇನೆ. ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಸರಿ.   ಇಂತಹ ಮಾತುಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *