ಡಿವಿಜಿ ಸುದ್ದಿ, ಮಂಗಳೂರು: ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಇರಲಿಲ್ಲವೇ? ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.
ಮಂಗಳೂರಿನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ಹಮ್ಮಿಕೊಂಡ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಮಾನಾಥ ರೈ, ಯು.ಟಿ. ಖಾದರ್ ಸಚಿವರಾಗಿದ್ದಾಗ ಡ್ರಗ್ಸ್ ಬಗ್ಗೆ ಯಾಕೆ ತನಿಖೆ ಮಾಡಿಲ್ಲ?. ಈ ಡ್ರಗ್ಸ್ ಮಾಫಿಯಾದಲ್ಲಿ ಮಂಗಳೂರಿನ ಮಾಜಿ ಮೇಯರ್ ಒಬ್ಬರ ಮಗ ಇರಲಿಲ್ಲವೇ? ಎಂದರು.
ಬಿಜೆಪಿ ಸರ್ಕಾರ ಬಂದ ಮೇಲೆ ಕೊಲೆಗಳ ಸರಣಿ ನಿಂತು ಹೋಗಿವೆ. ಮುಂದಿನ ಅಕ್ಟೋಬರ್ನಲ್ಲಿ ಮರಳು ನೀತಿ ಜಾರಿಗೆ ತರುತ್ತೇವೆ. ಮಂಗಳೂರಿನಲ್ಲಿ ಯಾವುದೇ ಪಬ್ ಪರವಾನಗಿ ನೀಡಲು ಬಿಡುವುದಿಲ್ಲ ಎಂದರು.



