Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ಚುನಾವಣೆ: ಶಂಕರ್, ಎಂಟಿಬಿ ನಾಗರಾಜ್ ಗೆ ಟಿಕೆಟ್; ವಿಶ್ವನಾಥ್ ಗಿಲ್ಲ ಅವಕಾಶ

ಪ್ರಮುಖ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಶಂಕರ್, ಎಂಟಿಬಿ ನಾಗರಾಜ್ ಗೆ ಟಿಕೆಟ್; ವಿಶ್ವನಾಥ್ ಗಿಲ್ಲ ಅವಕಾಶ

ಡಿವಿಜಿ ಸುದ್ದಿ, ಬೆಂಗಳೂರುರಾಜ್ಯ ವಿಧಾ‌ನ ಪರಿಷತ್‌ಗೆ ಜೂನ್ 29ರಂದು ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಟಿಕೆಟ್ ನೀಡಿದೆ. ಆದರೆ, ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಎಚ್. ವಿಶ್ವನಾಥ್ ಗೆ ಟಿಕೆಟ್ ಕೈ ತಪ್ಪಿದೆ.

ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಎಚ್. ವಿಶ್ವನಾಥ್ ಹುಣಸೂರಿನಲ್ಲಿ ನಡೆದಿದ್ದ ಉಪ‌ಚುನಾವಣೆಯಲ್ಲಿ ಸೋತಿದ್ದರು. ಕಲಬುರ್ಗಿಯ ಸುನಿಲ್ ವಲ್ಯಾಪುರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಾಪಸಿಂಹ ನಾಯಕ್ ಅವರು ಟಿಕೆಟ್ ಪಡೆದುಕೊಂಡಿರುವ ಇನ್ನಿಬ್ಬರು  ಅಭ್ಯರ್ಥಿಗಳಾಗಿದ್ದಾರೆ. ನಾಮ ಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಟಿಕೆಟ್ ಘೋಷಿಸಲಾಗಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎಂಟಿಬಿ ನಾಗರಾಜ್ ಉಪ ಚುನಾವಣೆಯಲ್ಲಿ ಸೋತಿದ್ದರೂ, ಪರಿಷತ್‌ಗೆ ಟಿಕೆಟ್ ನೀಡಲಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಆರ್.ಶಂಕರ್‌ಗೂ ಟಿಕೆಟ್ ದೊರೆತಿದೆ.ಚಿಂಚೋಳಿಯಿಂದ ಎರಡು ಬಾರಿ ವಿಧಾನಸಭೆ ಸದಸ್ಯರಾಗಿ, ಸಚಿವರಾಗಿದ್ದ ಸುನಿಲ್ ವಲ್ಯಾಪುರೆ ಅವರಿಗೆ ಪರಿಷತ್ ಪ್ರವೇಶಕ್ಕೆ ಅವಕಾಶ ದೊರೆತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top