ಅಧಿವೇಶನ ಮುಗಿಯುವರಿಗೆ ಮೂಲ ಬಿಜಿಪಿಗರಿಗೆ ಸಚಿವ ಸ್ಥಾನಕ್ಕೆ ಕೊಕ್ಕೆ ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಬೆಂಗಳೂರು: ಫೆ. 17 ರಿಂದ ಪ್ರಾರಂಭವಾಗಲಿರುವ ಅಧಿವೇಶನ ಮುಗಿಯುವ ವರೆಗೂ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ನೀಡದಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ  ಎನ್ನಲಾಗುತ್ತಿದ್ದು,13 ಸ್ಥಾನ ತುಂಬಿಕೊಳ್ಳುವ ಬದಲು 10  ಸ್ಥಾನ ಮಾತ್ರ ತುಂಬಿಕೊಳ್ಳುವಂತೆ ಆದೇಶ ಬಂದಿದೆ ಎಂದು ಹೇಳಲಾಗುತ್ತಿದೆ.

bjp dvgsuddi

10 ಪ್ಲೆಸ್ 3 ಸೂತ್ರದ ಪ್ರಕಾರ 10 ಸ್ಥಾನ ಉಪ ಚುನಾವಣೆ ಗೆದ್ದವರಿಗೆ ಹಾಗೂ 3 ಸ್ಥಾನ ಮೂಲ ಬಿಜೆಪಿಗರಿಗೆ ನೀಡುವಂತೆ ಹೈ ಕಮಾಂಡ್ ಸೂಚನೆ ನೀಡಿತ್ತು. ಆದರೆ, ಮೂಲ ಬಿಜೆಪಿಗರಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿದ್ದು, ಇನ್ನೊಂದೆಡೆ ಕಳೆದ ವಿಧನಸಾಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ  ಸೋತಿರುವ ಸಿ.ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಮೂಲ ಬಿಜೆಪಿಗರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಧಿವೇಶನ ಆಗುವವರೆಗೂ ಮೂರು ಸ್ಥಾನ ತಡೆ ಹಿಡಿದು . ಅಧಿವೇಶನ ನಂತರ ಹಂಚಿಕೆ ಮಾಡುವಂತೆ ಸೂಚನೆ ಬಂದಿದೆ ಎಂದು ಹೇಳಿಲಾಗುತ್ತಿದೆ.

ಇನ್ನೊಂದೆಡೆ ನಾಳೆ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ನಡೆಯುತ್ತಿದೆ. 13 ಜನ ನೂತನ ಸಚಿವರಾಗ್ತಾರೋ, ಇಲ್ಲವೇ ಕೇವಲ 10 ಮಾತ್ರ ನೂತನ ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸುತ್ತಾರೋ ಎಂಬುದು ಕುತೂಹಲ ಮೂಡಿಸಿದೆ.

   

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *