Connect with us

Dvgsuddi Kannada | online news portal | Kannada news online

ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬ

ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬ

ಡಿವಿಜಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ವಿದೇಶಿ ಪ್ರವಾಸ ಮುಗಿಸಿ ಬಂದ ನಂತರ ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಅಂತಾ ಹೇಳಲಾಗುತ್ತಿತ್ತು. ಆದರೆ , ಈಗ  ಇನ್ನು ಒಂದಿಷ್ಟು ದಿನ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

ಸಿಎಂ ಯಡಿಯೂರಪ್ಪ ಸೋಮವಾರ ದೆಹಲಿಗೆ ಹೋಗುತ್ತಾರೆ ಅಂತ  ಹೇಳಲಾಗುತ್ತಿತ್ತು. ಆದರೆ, ಈಗ ಸಿಎಂ ಸೋಮವಾರ ದೆಹಲಿಗೆ ಹೋಗುವುದು ಡೌಟ್  ಅಂತಾ ಗೊತ್ತಾಗಿದೆ. ಹೀಗಾಗಿ 2 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮೈಸೂರು, ಮಂಡ್ಯ , ಹಾಸನ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗೆ  ಚಾಲನೆ ನೀಡಲಿದ್ದಾರೆ

yeddiyurappa 1

ದಿನದಿಂದ ದಿನಕ್ಕೆ ಸಂಪುಟ ವಿಸ್ತರಣೆ ಮುಂದೂಡುತ್ತಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಆತಂಕ ಮನೆ ಮಾಡಿದೆ. ಅದರಲ್ಲೂ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಬರಲು ಕಾರಣವಾಗಿದ್ದ 17 ಶಾಸಕರಲ್ಲಿ 6 ಜನರಿಗೆ ಅಷ್ಟೇ ಸಚಿವ ಸ್ಥಾನ  ಎಂದು ಹೇಳಲಾಗುತ್ತಿದೆ. ಇದರಿಂದ 17 ಶಾಸಕರಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಇನ್ನು ಬಿಜೆಪಿಯಲ್ಲಿ ಸಚಿವ ಸ್ಥಾನಕಕ್ಕಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಈ ಎಲ್ಲವನ್ನು ಮುಖ್ಯಮಂತ್ರಿಯಡಿಯೂರಪ್ಪ ಯಾವ ರೀತಿ ನಿರ್ವಹಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top