ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ: ಭ್ರಷ್ಟಾಚಾರ ಆರೋಪ ತಳ್ಳಿ ಹಾಕಿದ ಸಿಎಂ ಪುತ್ರ ವಿಜಯೇಂದ್ರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಮೇಲೆ ಕಾಂಗ್ರೆಸ್ ಪಕ್ಷ ಮಾಡಿದ 5 ಸಾವಿರ ಕೋಟಿ ಭ್ರಷ್ಟಾಚಾರ ಆರೋಪವನ್ನು ಬಿಜೆಪಿ ಉಪಾಧ್ಯಕ್ಷ ಬಿ.ವೈ.  ವಿಜಯೇಂದ್ರ ತಳ್ಳಿ ಹಾಕಿದ್ದಾರೆ.

ಬೆಳಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ವಿಜಯೇಂದ್ರ  ವಿರುದ್ಧ  5 ಸಾವಿಕ ಕೋಟಿ ಭಷ್ಟಾಚಾರ ಆರೋಪ ಮಾಡಿದ್ದರು. ಈ ಬಗ್ಗೆ ಬಿಜೆಪಿ ಶಾಸಕರೇ ವಿಜಯೇಂದ್ರ ವಿರುದ್ಧ ಪತ್ರ ಬರೆದಿದ್ದಾರೆ ಎಂದು ಪತ್ರ ಬಿಡುಗಡೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಕಟ್ಟು ಕಥೆ ಕಟ್ಟುವುದರಲ್ಲಿ, ಹಸಿ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಟೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ, ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು ಎಂದಿದ್ದಾರೆ.

ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ವಿಜಯೇಂದ್ರ ಅವರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ಆಡಿಯೋ ಮತ್ತು ವಿಡಿಯೋ ಕ್ಲೀಪಿಂಗ್‍ಗಳನ್ನು ನಾವು ಸಂಗ್ರಹಿಸಿದ್ದೇವೆ. ಈ ಬಗ್ಗೆ ಸರ್ಕಾರ ತನಿಖೆ ಕೈಗೊಳ್ಳದಿದ್ದರೆ,  ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ದೆಹಲಿಯಲ್ಲಿ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತೇವೆ ಹೇಳಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *