ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ: ಸಿ.ಟಿ. ರವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಅದರ ತನಿಖೆ ನಡೆಯಲಿದ್ದು, ಎಲ್ಲರ ಬಣ್ಣ ಬಯಲಾಗದಲಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

ಇದನ್ನು ಓದಿ :ಇಂದಿರಾ ಗಾಂಧಿ ಕ್ಯಾಂಟೀನ್ ಹೆಸರು ಬದಲಾವಣೆಗೆ ಸರ್ಕಾರ ಚಿಂತನೆ: ಆರ್‌ ಅಶೋಕ್‌

 ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಯೋಜನೆ. ಒಂದೊಂದು ಕ್ಯಾಂಟೀನ್ ಕಟ್ಟಡಕ್ಕೆ 1 ಕೋಟಿ ವೆಚ್ಚ ಮಾಡಲಾಗಿದೆ ಭಾರೀ ಅವ್ಯವಹಾರ ನಡೆದಿದೆ. ಇಂದಿರಾ ಕ್ಯಾಂಟೀನಿಗೆ ಕಾಂಗ್ರೆಸ್ ದುಡ್ಡು ಕೊಡುವುದಾದರೆ ಅದಕ್ಕೆ ನೆಹರೂ ಹೆಸರು ಇಡಲಿ, ರಾಜೀವ್ ಹೆಸರು ಇಡಲಿ ಅಥವಾ ಮಾಂಸಾಹಾರ ಆರಂಭಿಸಿ ಸೋನಿಯಾ ಹೆಸರನ್ನೂ ಇಡಲಿ ಎಂದರು.

ಅನ್ನಪೂರ್ಣೇಶ್ವರಿ ಹೆಸರಿಡಲಿ

ಕಾಂಗ್ರೆಸ್ ಪಕ್ಷದ ತನ್ನ ಹಣದಿಂದ ಈ ಕ್ಯಾಂಟೀನ್ ತೆರೆದಿದ್ದರೆ, ಒಂದಿಷ್ಟು ಪಾಪನಾದ್ರೂ ಕಡಿಮೆಯಾಗುತ್ತಿತ್ತು. ಆದರೆ, ಸರ್ಕಾರದ ದುಡ್ಡಿನಲ್ಲಿ ಇನ್ನು ಮುಂದೆ ಹಣ ನುಂಗುವ ಯೋಜನೆಯನ್ನು ಅದೇ ಹೆಸರಲ್ಲಿ ಮುಂದುದುವರಿಸುವುದು ಸರಿಯಲ್ಲ. ಈ ಯೋಜನೆಗೆ ಅನ್ನಪೂರ್ಣೇಶ್ವರಿಯ ಹೆಸರು ಇಡಬಹುದು.ವಾಲ್ಮೀಕಿ ಅನ್ನ ಕುಟೀರ ಎಂಬ ಹೆಸರು ಇಡುವ ನಿರ್ಧಾರಕ್ಕೆ ಬಂದಿಲ್ಲ. ಇಂತಹ ಸಲಹೆಯೊಂದು ಕಂದಾಯ ಸಚಿವರಿಗೆ ಬಂದಿರಬಹುದು ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *