ಡಿವಿಜಿ ಸುದ್ದಿ, ದಾವಣಗೆರೆ: ಮಧ್ಯ ಕರ್ನಾಟಕದ ವಾಣಿಜ್ಯನಗರಿ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನದ ಅವಶ್ಯಕತೆ ಇದ್ದು, ಈ ಬಾರಿ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದರು.
ಹರಿಹರ ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜನಹಳ್ಳಿ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಬೆಳಗಾವಿ, ಬೆಂಗಳೂರು ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನ ನೀಡಲಾಗುತ್ತದೆ. ಅದೇ ರೀತಿ ದಾವಣಗೆರೆ ಎಲ್ಲಾ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದ್ದು, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಅವಶ್ಯಕತೆ ಇದೆ ಎಂದರು.
ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ. ಆದರೆ, ಅವರ ಜೊತೆಗೆ ನನಗೂ ಅವಕಾಶ ನೀಡಬೇಕು. ಈ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.



