Connect with us

Dvgsuddi Kannada | online news portal | Kannada news online

ಫೆ. 15 ರಂದು ದಾವಣಗೆರೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ

ಪ್ರಮುಖ ಸುದ್ದಿ

ಫೆ. 15 ರಂದು ದಾವಣಗೆರೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ವೀರೇಶ್ ಹನಗವಾಡಿ ಅವರ ಪದಗ್ರಹಣ ಸಮಾರಂಭ ಫೆ. 15 ರಂದು ನಗರದ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ನಿಕಟಪೂರ್ವ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಭಾಗವಹಿಸಲಿದ್ದು, ಸಂಸದ ಜಿ.ಎಂ ಸಿದ್ದೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭಾಗವಹಿಸಲಿದ್ದಾರೆ ಎಂದರು.

ಪಾಲಿಕೆಯಲ್ಲಿ ಬಿಜೆಪಿಗೆ ಸಂಖ್ಯಾ ಬಲವಿದ್ದು, ಈ ಬಾರಿ ಬಿಜೆಪಿ ಪಾಲಿಕೆ ಅಧಿಕಾರ ಹಿಡಿಯಲಿದೆ. ಮೇಯರ್ ಯಾರು ಎಂಬುದು ಇನ್ನು ಅಂತಿಮಗೊಳಿಸಿಲ್ಲ.  ಅಧಿಕಾರಕ್ಕಾಗಿ ನಾವು ಯಾವುದೇ ವಾಮಮಾರ್ಗ ಅನುಸರಿಸುತ್ತಿಲ್ಲ. ಪಾಲಿಕೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಜನತೆಗೆ ಗೊತ್ತಿದೆ. ಫೆ. 18 ರಂದು ರಾತ್ರಿ ಪಕ್ಷದ ಕೋರ್ ಕಮಿಟಿ ಮೀಟಿಂಗ್ ನಡೆಯಲಿದ್ದು, ಮೇಯರ್ ಸ್ಥಾನಕ್ಕೆ ಹೆಸರು ಅಂತಿಮಗೊಳಿಸಲಾಗುವುದು. ನಮ್ಮ ಪಕ್ಷದ ಸಿದ್ಧಾಂತಕ್ಕೆ ಎಲ್ಲರು ಬದ್ಧವಾಗಿದ್ದು, ಪಕ್ಷದ  ನಿರ್ಧಾರ ಅಂತಿಮವಾಗಲಿದೆ ಎಂದರು.

ಈ ಸಂದರ್ಭದಲಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಆನಂದ್ ರಾವ್ ಸಿಂಧ್ಯಾ, ಬಿ.ಶ್ರೀನಿವಾಸ್, ಬೇತೂರ್ ಸಬವರಾಜ್, ಸೋಗಿ ಶಾಂತಕುಮಾರ್, ಧನುಷ್ ರೆಡ್ಡಿ, ಪ್ರವೀಣ್ ಕುಮಾರ್, ವೀರಯ್ಯ  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top