Connect with us

Dvgsuddi Kannada | online news portal | Kannada news online

ಚನ್ನಪಟ್ಟಣದಿಂದಲೇ ಸ್ಪರ್ಧಿಸಿ ಮತ್ತೆ ಸಿಎಂ ಆಗುತ್ತೇನೆ: ಎಚ್.ಡಿ. ಕುಮಾರಸ್ವಾಮಿ

ಪ್ರಮುಖ ಸುದ್ದಿ

ಚನ್ನಪಟ್ಟಣದಿಂದಲೇ ಸ್ಪರ್ಧಿಸಿ ಮತ್ತೆ ಸಿಎಂ ಆಗುತ್ತೇನೆ: ಎಚ್.ಡಿ. ಕುಮಾರಸ್ವಾಮಿ

ಡಿವಿಜಿ ಸುದ್ದಿ, ಚನ್ನಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದಲೇ ಸ್ಪರ್ಧಿಸಿ ಮತ್ತೆ ರಾಜ್ಯದ ಸಿಎಂ ಆಗುವ ನಂಬಿಕೆ ಇದೆ ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚನ್ನಪಟ್ಟಣ ಕ್ಷೇತ್ರ  ಬದಲಾವಣೆ ಮಾಡುವ ಪ್ರಶ್ನೆ ಇಲ್ಲ.  ಚನ್ನಪಟ್ಟಣದ ಜನತೆ ಪ್ರೀತಿಯಿಂದ  ಶಾಸಕನನ್ನಾಗಿ  ಮಾಡಿದ್ದಾರೆ. ಈ ಕ್ಷೇತ್ರವನ್ನು ಬದಲಾವಣೆ ಪ್ರಶ್ನೆ ಇಲ್ಲ.  ರಾಮನಗರ ಮತ್ತು ಚನ್ನಪಟ್ಟಣ ನನ್ನ ಎರಡು ಕಣ್ಣುಗಳು. ರಾಮನಗರ ಚನ್ನಪಟ್ಟಣ ಎರಡು ನನಗೆ ಒಂದೇ ಎಂದರು.

ಚನ್ನಪಟ್ಟಣ ಬಿಟ್ಟು ಮಾಗಡಿಗೆ ಹೋಗುತ್ತೇನೆ ಎಂಬುದು ಸುಳ್ಳು. ಮಾಗಡಿ, ರಾಮನಗರ, ಚನ್ನಪಟ್ಟಣದಲ್ಲಿ ನಮ್ಮ ಪಕ್ಷ ಸದೃಢವಾಗಿದೆ. ಸಮರ್ಥ ಕಾರ್ಯಕರ್ತರಿದ್ದಾರೆ ಎಂದರು.

ನಂಜಾವಧೂತ ಸ್ವಾಮೀಜಿ ಮಾತನಾಡಿ, ಕುಮಾರಸ್ವಾಮಿ  ಸಿಎಂ ಆಗಿದ್ದಾಗ  ಒಳ್ಳೆಯ ಕೆಲಸ ಮಾಡಿದ್ದರು. ಅವರ ಕೆಲಸ ಕಾರ್ಯಗಳು ಸರಿಯಾಗಿ ಪ್ರಚಾರ ವಾಗಲಿಲ್ಲ. ಅವರು  ಮತ್ತೊಮ್ಮೆ  ಸಿಎಂ ಆಗೋ ದಿನ ಬಂದಿದೆ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top