Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ನವರೇ ದುಡ್ಡು ಕೊಟ್ಟು ಕಳುಹಿಸಿರಬೇಕು: ಸಂಸದ ಜಿ.ಎಂ. ಸಿದ್ದೇಶ್ವರ್

ಪ್ರಮುಖ ಸುದ್ದಿ

ಕಾಂಗ್ರೆಸ್ ನವರೇ ದುಡ್ಡು ಕೊಟ್ಟು ಕಳುಹಿಸಿರಬೇಕು: ಸಂಸದ ಜಿ.ಎಂ. ಸಿದ್ದೇಶ್ವರ್

ಡಿವಿಜಿ ಸುದ್ದಿ, ದಾವಣಗೆರೆ: ಕಾಂಗ್ರೆಸ್ ನವರೇ ದುಡ್ಡು ಕೊಟ್ಟು ಮತದಾನಕ್ಕೆ ಬರಬೇಡ ಎಂದು ತಮ್ಮ ಪಕ್ಷದ ಸದಸ್ಯರಿಗೆ ಕಳುಹಿಸಿರಬೇಕೆಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ದಾವಣಗೆರೆ ಮಹಾನಗರ ಪಾಲಿಕೆಗೆ ನೂತನ ಮೇಯರ್ ಆಗಿ ಅಜಯ್ ಕುಮಾರ್ ಆಯ್ಕೆಯಾದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾವು ಯಾವ ಆಪರೇಷನ್ ಕಮಲ ಮಾಡಿಲ್ಲ. ಕಾಂಗ್ರೆಸ್ ನವರೇ  ಅಜಯ್ ಕುಮಾರ್ ಮೇಯರ್ ಆಗಲಿ ಎಂದು, ತಮ್ಮ ಪಕ್ಷದ ಸದಸ್ಯರಿಗೆ  ಅವರೇ ದುಡ್ಡು ಕೊಟ್ಟು ಕಳುಹಿಸಿರಬೇಕು. ಹೀಗಾಗಿ ಅವರು ಮತದಾನದಲ್ಲಿ ಭಾಗಿಯಾಗಿಲ್ಲ  ಎಂದು  ತಿರುಗೇಟು ನೀಡಿದರು. ಇದೊಂದು ಚರಿತ್ರೆಯಲ್ಲಿ ಬರೆದಂತಹ ದಿನ. ಮೇಯರ್ ಚುನಾವಣೆ ಅತ್ಯಂತ ಸರಳ, ಸುಲಭವಾಗಿ ಅಧಿಕಾರಿಗಳು ನಡೆಸಿಕೊಟ್ಟಿದ್ದಾರೆ ಎಂದರು.

mayor ajaya kumar

ಬಿಜೆಪಿ ಆಪರೇಷನ್ ಕಮಲ ಮಾಡಿದ್ದು, ನಮ್ಮ ಪಕ್ಷದ ಸದಸ್ಯರನ್ನು ಕೋಟಿಗಟ್ಟಲೇ ಹಣಕೊಟ್ಟು ಖರೀದಿ ಮಾಡಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆರೋಪಿಸಿದ್ದರು. ಚುನಾವಣಾಧಿಕಾರಿಗಳು ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರು, ಎಂಲ್ಸಿಗಳು  ಮತದಾನ ಬಹಿಷ್ಕರಿಸಿದ್ದರು. ಕಾಂಗ್ರೆಸ್ ನ ಮೂರು ಸದಸ್ಯರು ಮತದಾನದಲ್ಲಿ ಭಾಗಿಯಾಗದ ಕಾರಣ ಬಿಜೆಪಿ ಗೆಲುವು ಸುಲಭವಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top