ರಾಜೀನಾಮೆ ನೀಡಲ್ಲ, ಗೊಂದಲ ಸೃಷ್ಟಿ ಮಾಡಬೇಡಿ: ರಮೇಶ್ ಜಾರಕಿ ಹೊಳಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಹೇಳಿಕೆ ನೀಡಿಲ್ಲ, ಗೊಂದಲ ಸೃಷ್ಟಿ ಮಾಡಬೇಡಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ‌‌‌‌ ನೀಡಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆ ಹೇಳಿಕೆಯನ್ನು ಟ್ವಿಸ್ಟ್ ಮಾಡಿದ್ದಾರೆ. ನಾನು ಯಾರಿಗೆ ಸ್ಪಷ್ಟೀಕರಣ ನೀಡಬೇಕೋ ಅವರಿಗೆ ನೀಡುತ್ತೇನೆ. ಮಾಧ್ಯಮಗಳ ಮುಂದೆ ನಾನು ಏನನ್ನು ಹೇಳುವುದಿಲ್ಲ ಎಂದರು.

ನೀರಾವರಿ ಇಲಾಖೆ ವಿಚಾರದಲ್ಲಿ ನಾನು ಎಲ್ಲರ ಸಲಹೆ ಪಡೆಯುತ್ತೇನೆ. ಹೆಚ್. ಕೆ. ಪಾಟೀಲ್ ಅವರ ಮಾರ್ಗದರ್ಶನ ಪಡೆಯುತ್ತೇನೆ. ಈಗಾಗಲೇ ಸಮಿತಿ ವರದಿ ಬಂದ ನಂತರ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಸಿಗುತ್ತದೆ. ಈಗ ನಿಗಮ ಕೊಟ್ಟರೆ ಸಂತೋಷವಾಗುತ್ತದೆ ಎಂದರು.

ಮಹದಾಯಿ ವಿಷಯವಾಗಿ ನಾಳೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ. 26 ರಂದು ಕೇಂದ್ರ‌ ಸಚಿವರನ್ನು ಭೇಟಿ ಮಾಡುತ್ತೇವೆ. ಆದಷ್ಟು ಬೇಗ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ನಮ್ಮ ಸರ್ಕಾರ ಇರುವಾಗಲೇ ಆದಷ್ಟು ಬೇಗ ಜಾರಿಗೆ ತರುವಂತೆ ಆಗ್ರಹಿಸುತ್ತೇವೆ ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *