ಬಿಜೆಪಿ ಎಂಎಲ್ಸಿಗಳನ್ನು ದೂರವಿಟ್ಟು ಚುನಾವಣೆ ನಡೆಸಲು ಕಾಂಗ್ರೆಸ್ ಆಗ್ರಹ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಕ್ರಮವಾಗಿ 8 ಎಂಎಲ್ಸಿ ಗಳನ್ನು ಮತದಾರ ಪಟ್ಟಿಯಲ್ಲಿ ಸೇರಿಸಿದ್ದು,  ಈ  ಎಂಎಲ್ಸಿಗಳನ್ನು  ಮೇಯರ್ ಚುನಾವಣೆಯಿಂದ ದೂರವಿಟ್ಟು ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್, ನಾಳೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದ್ದು, ಸರ್ಕಾರ ಸಿದ್ಧಪಡಿಸಿದ ಮತದಾರ ಪಟ್ಟಿಯಲ್ಲಿ ಬಿಜೆಪಿಯ 8 ಎಂಎಲ್ಸಿಗಳನ್ನು ತರಾತುರಿಯಲ್ಲಿ ಮತದಾರ ಪಟ್ಟಿಯಲ್ಲಿ ಸೇರಿಸಲಾಗಿದೆ.  ಇದು ಕಾನೂನಿಗೆ ವಿರುದ್ಧವಾಗಿದ್ದು, ಚುನಾವಣೆಯಲ್ಲಿ ನೀತಿ ನಿಯಮ ಪಾಲನೆ ಮಾಡದೇ ಬಿಜೆಪಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಚುನಾವಣೆ ವೀಕ್ಷಕರಾಗಿ ಬಂದ ಹರ್ಷಗುಪ್ತ ಅವರನ್ನು ಭೇಟಿ ಮಾಡಿ, ಚುನಾವಣೆ ಅಕ್ರಮದ ಬಗ್ಗೆ ಮಾಹಿತಿ ನೀಡಿದಾಗ ಅವರು ಪರಿಶೀಲನೆ ನಡೆಸಿದರು. ಆಗ ಯಾವ ಎಂಎಲ್ಸಿಗಳು ಮೂಲ ನಿವಾಸದಲ್ಲಿ ವಾಸವಿಲ್ಲದ ಇಲ್ಲದ ಕಾರಣ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಕೋರ್ಟ್ ನಲ್ಲಿಯೂ ಪ್ರಕರಣ ದಾಖಲಾಗಿದೆ.  ಹೀಗಾಗಿ ಮತದಾರ ಪಟ್ಟಿಯಿಂದ ಎಂಎಲ್ಸಿಗಳನ್ನು ಕೈ ಬಿಟ್ಟು ಚುನಾವಣೆ ನಡೆಸಬೇಕು ಎಂದು ಮನವಿ ಮಾಡುತ್ತೇವೆ ಎಂದರು .

ಈ ಸಂದರ್ಭದಲ್ಲಿ  ದೇವರಮನೆ ಶಿವಕುಮಾರ್,  ಕೆ. ಚಮನ್ ಸಾಬ್, ಎ. ನಾಗರಾಜ್, ಅಯೂಬ್ ಪೈಲ್ವಾನ್, ಅಬ್ಲುಲ್ ಲತೀಫ್, ಗಣೇಶ್ ಹುಲ್ಮನಿ ಸೇರಿದಂತೆ ಮತ್ತಿತತರರು ಉಪಸ್ಥಿತರಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *