Connect with us

Dvgsuddi Kannada | online news portal | Kannada news online

ಮುಖ್ಯಮಂತ್ರಿಗೆ ಪುತ್ರ ವ್ಯಾಮೋಹ ಹೆಚ್ಚಾಗಿ ಆಡಳಿತ ಕುಸಿದಿದೆ: ಡಿ.ಕೆ. ಶಿವಕುಮಾರ್

ರಾಜಕೀಯ

ಮುಖ್ಯಮಂತ್ರಿಗೆ ಪುತ್ರ ವ್ಯಾಮೋಹ ಹೆಚ್ಚಾಗಿ ಆಡಳಿತ ಕುಸಿದಿದೆ: ಡಿ.ಕೆ. ಶಿವಕುಮಾರ್

ಡಿವಿಜಿ ಸುದ್ದಿ, ಶಿರಾ: ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ. ಮುಖ್ಯಮಂತ್ರಿಗೆ ಪುತ್ರ ವ್ಯಾಮೋಹ ಹೆಚ್ಚಾಗಿ ಆಡಳಿತ ಕುಸಿದಿದ್ದು,  ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಉಪ ಚುನಾವಣಾ ಫಲಿತಾಂಶ ರಾಜಕೀಯ ದಿಕ್ಸೂಚಿಯಲ್ಲ. ಈ ಫಲಿತಾಂಶ  ರಾಜ್ಯದ ಭ್ರಷ್ಟ ಸರ್ಕಾರಕ್ಕೆ ಒಂದು ಸಂದೇಶ ನೀಡಲಿದೆ.ಉತ್ತರ ಕರ್ನಾಟಕ ಜಲ ಪ್ರವಾಹಕ್ಕೆ  ಯಾವೊಬ್ಬ ಸಚಿವರು ಜನರ ನೆರವಿಗೆ ಬರುತ್ತಿಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ಮುಖಂಡರು ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ.  ಬಿಜೆಪಿ ವಿಜಯೇಂದ್ರ ನೇತೃತ್ವದಲ್ಲಿ ಉಪ ಚುನಾವಣೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ ಮೇಲೆ ಬೇರೆಯವರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ.ಶಿರಾ ಮತದಾರರು ಬುದ್ಧಿವಂತರಿದ್ದಾರೆ. ಜೆಡಿಎಸ್ ಶಾಸಕರಿದ್ದಾಗ ಏನಾಗಿದೆ, ಬಿಜೆಪಿ ಸರ್ಕಾರದಲ್ಲಿ ಏನಾಗಿದೆ ಎನ್ನುವುದರ ಬಗ್ಗೆ ಮತದಾರರಿಗೆ ಗೊತ್ತಿದೆ.  ಕಾಂಗ್ರೆಸ್ ಪಕ್ಷದ ಆಂತರಿಕ ವರದಿಯಲ್ಲಿ ಶೇ 44 ರಷ್ಟು ಮತ ಪಡೆದು ಟಿ.ಬಿ‌.ಜಯಚಂದ್ರ ಅವರು ಬಹುಮತ ಪಡೆಯಲಿದ್ದಾರೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top