ಡಿವಿಜಿ ಸುದ್ದಿ, ಬೆಂಗಳೂರು: ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ಬಿಡ್ತಾರೆ. ಹೀಗಾಗಿ ನಾನು ಮತ್ತೆ ಕಾಂಗ್ರೆಸ್ಗೆ ಬರುತ್ತೇನೆ ಎಂದು 15 ದಿನದ ಹಿಂದಷ್ಟೇ ಯೋಗೇಶ್ವರ್ ನನ್ನ ಬಳಿ ಚರ್ಚಿಸಿದ್ದ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ತನ್ನ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಈಗ ಈ ರೀತಿಯ ಹೇಳಿಕೆ ನೀಡಿ ತಿರುಗೇಟು ನೀಡಿದ್ದಾರೆ.ನನ್ನ ಬಳಿ ಬಂದು ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆ ಎಂದು ಚರ್ಚೆ ಮಾಡಿದ್ದ. ಈ ವೇಳೆ ನಾನೇ ಬರುವುದು ಬೇಡ, ಬಿಜೆಪಿಯಲ್ಲಿಯೇ ಲಾಯಲ್ ಆಗಿ ಇರು ಎಂದು ಹೇಳಿ ಕಳುಹಿಸಿಕೊಟ್ಟಿದ್ದೆ. ಈಗ ಯಾಕೆ ಹೀಗೆ ಮಾತಾಡಿದ್ದರೋ ಗೊತ್ತಿಲ್ಲ. ಆತ ಮೆಂಟಲ್ ಆಗಿದ್ದಾರಾ ಎಂದು ಎಂದು ಪ್ರಶ್ನಿಸಿದ್ದಾರೆ.

ಜಿಲ್ಲೆಯಲ್ಲಿ ಡಿಕೆಶಿ ಸಹೋದರರು ಆಪರೇಷನ್ ಆರಂಭ ಮಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಅವರ ಪಕ್ಷದಲ್ಲಿ ಭವಿಷ್ಯ ಇಲ್ಲ. ಆದ್ದರಿಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಬರಲಿ. ಡಿಕೆ ಶಿವಕುಮಾರ್ ಅವರು ಚುನಾವಣೆಯಲ್ಲಿ ಗೆಲುವು ಪಡೆಯಲು ಕುಮಾರಸ್ವಾಮಿ ಸಹಾಯ ತೆಗೆದುಕೊಂಡಿದ್ದರು. ಇದೀಗ ಇಬ್ಬರ ನಡುವೆ ಒಗ್ಗಟ್ಟಿಲ್ಲ. ಅಂತರ್ ಯುದ್ಧ ಪ್ರಾರಂಭವಾಗಿದೆ ಎಂದು ಆರೋಪಿಸಿದ್ದರು.



