Connect with us

Dvgsuddi Kannada | online news portal | Kannada news online

ಕಾರಣ ನೀಡದೆ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದಿಂದ ಉಚ್ಚಾಟಿಸಬೇಕು: ಸಚಿವ ಈಶ್ವರಪ್ಪ

ಪ್ರಮುಖ ಸುದ್ದಿ

ಕಾರಣ ನೀಡದೆ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದಿಂದ ಉಚ್ಚಾಟಿಸಬೇಕು: ಸಚಿವ ಈಶ್ವರಪ್ಪ

 ಡಿವಿಜಿ ಸುದ್ದಿ, ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ  ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕು ಎಂದು  ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೆಲವರು ಬಾಯಿ ಚಪಲಕ್ಕೆ ಮೂರ್ಖತನದ ಹೇಳಿಕೆ ನೀಡುತ್ತಿರುತ್ತಾರೆ. ಇತ್ತೀಚೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಲ್ಲರಿಗೂ ನಿಮ್ಮ ಕ್ಷೇತ್ರದ ಸಮಸ್ಯೆ ಏನು ಅಂತ ಕೇಳಿ, ಬಗೆಹರಿಸಿಕೊಳ್ಳುವಂತೆ ಹೇಳಿದ್ದರು. ಸಭೆಯಲ್ಲಿ ಸುಮ್ಮನೆ ಬಾಯಿ ಮಚ್ಚಿ ಕುಳಿತುಕೊಂಡು, ಈಗ ಉತ್ತರ ಪೌರುಷದಂತೆ ಹೊರಗೆ ಬಂದು ಯತ್ನಾಳ್ ಹೇಳಿಕೆ ನೀಡುತ್ತಿದ್ದಾರೆ ಎಂದರು.

yatnal

ಯತ್ನಾಳ್ ಹೇಳಿಕೆಯಿಂದ ಪಕ್ಷದ ಮೇಲೆ ಯಾವ ಪರಿಣಾಮ ಬೀರಲ್ಲ. ಪದೇ ಪದೇ ಈ ರೀತಿಯ ಯತ್ನಾಳ್ ಹೇಳಿಕೆಗಳಿಗೆ ಬೆಲೆ ನೀಡಲ್ಲ. ಈ ಕೂಡಲೇ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಚಾಟಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top