ಡಿವಿಜಿ ಸುದ್ದಿ, ಬೆಂಗಳೂರು : ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿ, ಆರ್.ಎಸ್.ಎಸ್ ಕೊಡುಗೆ ಏನು ಇಲ್ಲ. ಕೇವಲ ಹಿಂದುತ್ವ ಅಜೆಂಡಾ ಇಟ್ಟುಕೊಂಡು ಬಿಜೆಪಿ ಕೆಲಸ ಮಾಡುತ್ತಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ಮುಸ್ಲಿಂ ವಿರುದ್ಧ ಕೆಲಸ ಮಾಡುತ್ತಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಖುದಾಸ್ ಸಾಹೇಬ್ ಈದ್ಗಾ ಹಾಲ್ ನಲ್ಲಿ ಜಾಯಿಂಟ್ ಆಕ್ಷನ್ ಕಮಿಟಿ ಆಯೋಜಿಸಿದ್ದ ಸಿಎಎ ವಿರೋಧಿ ಸಭೆಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಮುಖಂಡರು ಜೊತೆ ನಾವು ಕೊನೆವರೆಗೂ ಇರುತ್ತೇವೆ ಅಂತ ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಸೇರಿದಂತೆ ಎನ್.ಆರ್.ಸಿ ಮತ್ತು ಎನ್.ಪಿ.ಆರ್. ಜಾರಿಗೆ ಯಾವತ್ತು ಜೆಡಿಎಸ್ ಬೆಂಬಲಿಸಲ್ಲ, ಕಾಯ್ದೆ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ.ಈ ಕಾಯ್ದೆ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಮುಸ್ಲಿಂ ಸಮುದಾಯದ ಮೇಲೆ ಕೆಟ್ಟು ಹೆಸರು ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಬಿಜೆಪಿ ಒಂದು ಸಮುದಾಯವನ್ನ ಟಾರ್ಗೆಟ್ ಮಾಡುತ್ತಿದೆ.
ಈ ಕಾಯ್ದೆ ಜಾರಿಯಿಂದ ದೇಶದಾದ್ಯಂತ 7.5 ಕೋಟಿ ಜನರಿಗೆ ಅನ್ಯಾಯ ಆಗುತ್ತೆ. ಸಂವಿಧಾನವನ್ನು ತಿರುಚುವ ಕೆಲಸ ಬಿಜೆಪಿ ಮಾಡುತ್ತಿದ್ದು, ಇದಕ್ಕೆ ಜೆಡಿಎಸ್ ಬೆಂಬಲ ಕೊಡಲ್ಲ. ಸಿಎಎ ವಿರೋಧಿ ಹೋರಾಟಕ್ಕೆ ಜೆಡಿಎಸ್ ಯಾವಾಗಲೂ ಬೆಂಬಲ ನೀಡಲಿದೆ ಎಂದರು



