ಡಿವಿಜಿ ಸುದ್ದಿ, ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಇಬ್ಬರ ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ. ಆದರೆ, ಈ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದರು.ದೇಶದಲ್ಲಿ ಬಿಜೆಪಿ ಸಾಕಷ್ಟು ತಪ್ಪು ನಿರ್ಧಾರ ಕೈಗೊಂಡಿದೆ. ಮಂಗಳೂರು ಘಟನೆ ಸಂಬಂಧ ವಿಡಿಯೊ ಬಿಡುಗಡೆ ಮಾಡಿದ್ದೇನೆ.
ಮುಂಬರು ಅಧಿವೇಶನದಲ್ಲಿ ನಾನು ಈ ಬಗ್ಗೆ ಹೋರಾಟ ಮಾಡುತ್ತೇನೆ. ಈ ಕೂಡಲೇ ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇಲ್ಲವಾದರೆ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.



