ಡಿವಿಜಿ ಸುದ್ದಿ, ರಾಮನಗರ: ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದು, ಸರ್ಕಾರದ ವಿರುದ್ಧದ ಆರೋಪಕ್ಕೆ ಸೂಕ್ತ ದಾಖಲೆ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಸುದ್ದಿಗಾರ ಜೊತೆಯಲ್ಲಿ ಮಾತನಾಡಿದ ಅವರು, ಆರೋಪ ಮಾಡಿದರೆ ಅದಕ್ಕೆ ಸೂಕ್ತ ದಾಖಲೆ ಒದಗಿಸಬೇಕು. ಆದರೆ ಈ ವಿಚಾರದಲ್ಲಿ ಸರಿಯಾದ ದಾಖಲೆ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೆಲಸ ಮಾಡಿದ್ದು ನಾನು. ಆದರೆ ಹೆಸರು ಪಡೆದಿದ್ದು ಮಾತ್ರ ಕಾಂಗ್ರೆಸ್ ಎಂದರು.
ಸಮ್ಮಿಶ್ರ ಸರ್ಕಾರ ಪತನ ಆಗಲು ಅಕ್ರಮ ಮಾಫಿಯಾ ಹಣ ಕಾರಣ. ಮಂಗಳೂರು ಗಲಭೆ, ಡಿ.ಜೆ. ಹಳ್ಳಿ ಗಲಭೆ, ಈಗ ಡ್ರಗ್ಸ್ ದಂಧೆ. ಈ ಕೇಸ್ ಗಳ ತನಿಖೆ ಮಾತ್ರ ನಡೆಯುತ್ತಲೇ ಇದೆ. ಈ ಘಟನೆಗಳ ಕಾರಣರಾದವರನ್ನು ಬಂಧಿಸಲು ಸರ್ಕಾರಕ್ಕೆ ದಿಟ್ಟತನ ತೋರುತ್ತಿಲ್ಲ ಎಂದು ಆರೋಪಿಸಿದರು.



